ಮೈಸೂರು : ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ(ಕೆ-ಸೆಟ್) ನಗರದ ವಿವಿಧ ಕೇಂದ್ರಗಳಲ್ಲಿ ಭಾನುವಾರ ಸುಗಮವಾಗಿ ನಡೆಯಿತು.
ಕೆ-ಸೆಟ್ ಪರೀಕ್ಷೆಗೆ 18674 ಮಂದಿ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಆದರೆ, ಭಾನುವಾರ ನಡೆದ ಪರೀಕ್ಷೆಯಲ್ಲಿ 17038 ಮಂದಿ ಹಾಜರಾಗಿದ್ದು, 1636 ಮಂದಿ ಅಭ್ಯರ್ಥಿಗಳು ಗೈರಾಗಿದ್ದರು.
ಡಿ.ಬನುಮಯ್ಯ ಪದವಿ ಪೂರ್ವ ಕಾಲೇಜು, ಮಹಾರಾಣಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಹಾರಾಣಿ ವಿಜ್ಞಾನ ಪದವಿ ಕಾಲೇಜು, ಮಹಾರಾಜ ಸರ್ಕಾರಿ ಕಾಲೇಜು, ದೇವರಾಜ ಬಾಲಕಿಯರ ಕಾಲೇಜು, ಮರಿಮಲ್ಲಪ್ಪ ಪದವಿ ಕಾಲೇಜು, ಸರ್ಕಾರಿ ಆದರ್ಶ ವಿದ್ಯಾಲಯ, ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು,ಮಹಾಜನ ಕಾಲೇಜು ಸೇರಿದಂತೆ 41 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ಗಂಟೆಯ ತನಕ ನಡೆಯಿತು. ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪರೀಕ್ಷಾ ಕೇಂದ್ರದ ಒಳಗೆ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗೆ ಅವಕಾಶ ನೀಡಿರಲಿಲ್ಲ.
ವಿವಿಧ ಕೇಂದ್ರಗಳಿಗೆ ಭೇಟಿ
ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನೋಡೆಲ್ ಅಧಿಕಾರಿಗಳೂ ಆಗಿರುವ ಎಡಿಸಿ, ಮಹಾರಾಜ ಪಿಯು ಕಾಲೇಜು,ಮರಿಮಲ್ಲಪ್ಪ ಕಾಲೇಜು,ಸೆಂಟ್ ಫಿಲೋಮಿನಾ ಕಾಲೇಜು ಕೇಂದ್ರಗಳಿಗೆ ತೆರಳಿ ಪರಿಶೀಲಿಸಿ ಮೇಲ್ವಿಚಾರಕರಿಂದ ಮಾಹಿತಿ ಪಡೆದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…