Mysore
27
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಗೊಂದಲಕ್ಕೆ ಎಡೆಮಾಡಿಕೊಟ್ಟಿರುವ ಕೆ ಎಸ್‌ ಒ ಯು ಹಣಕಾಸು ಅಧಿಕಾರಿ ವರ್ಗಾವಣೆ

ಮೈಸೂರು :  ಕರ್ನಾಟಕ ರಾಜ್ಯ ಮುಕ್ತ ವಿವಿ ಹಣಕಾಸು ಅಧಿಕಾರಿ ಖಾದರ್ ಪಾಷ ಅವರನ್ನು ಆರ್ಥಿಕ ಇಲಾಖೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಗೊಂದಲಕ್ಕೆ ಎಡೆಮಾಡಿದೆ.

ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಸ್ತುತ ನಿಯೋಜನೆ ಮೇಲೆ ಕೆಎಸ್ಒಯು ಹಣಕಾಸು ಅಧಿಕಾರಿಯಾಗಿರುವ ಖಾದರ್ ಪಾಷ ಅವರನ್ನು ಆಡಾಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಆಡಿಷನಲ್ ಡೈರಕ್ಟರ್  ಪ್ರಾದೇಶಿಕ ಕಚೇರಿ  ಮೈಸೂರು. ಇಲ್ಲಿಗೆ ಸ್ವಂತ ವೇತನ ಶ್ರೇಣಿ ಮೇಲೆ ವರ್ಗಾಯಿಸಿ ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ.ಧಾಯಪುಲೆ  ನ.10 ರಂದು ಆದೇಶ ಹೊರಡಿಸಿದ್ದಾರೆ.

ವಿಪರ್ಯಾಸವೆಂದರೆ, ಈ ಹುದ್ದೆಯಲ್ಲಿ ಈಗಾಗಲೇ ಹಾಲಿ ಸಿದ್ದರಾಜು ಎಂಬುವವರು ಕರ್ತವ್ಯ ನಿರ್ವಹಿಸುತ್ತಿದ್ದು, ಹುದ್ದೆ ಖಾಲಿ ಇಲ್ಲ. ಜತೆಗೆ ಸಿದ್ದರಾಜು ಅವರನ್ನು ವರ್ಗಾಯಿಸಿರುವ ಬಗೆಗೂ ಆದೇಶದಲ್ಲಿ ಸ್ಪಷ್ಟ ಮಾಹಿತಿ ಇಲ್ಲ. ಇದು ಗೊಂದಲಕ್ಕೆ ಎಡೆಮಾಡಿದೆ.

ಪ್ರಮುಖವಾಗಿ, ಈ ಹಿಂದೆ (ಖಾದರ್ ಪಾಷ ಅವರ ಅವಧಿ ಸೇರಿದಂತೆ ) ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಕೇಳಿ ಬಂದಿದ್ದ ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಖರ್ಚು, ವೆಚ್ಚದ ಬಗ್ಗೆ ಆಡಿಟ್ ನಡೆಸಲು ಸಿದ್ದರಾಜು ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಅದೇ ಹುದ್ದೆಗೆ ಆರೋಪ ಕೇಳಿ ಬಂದಿದ್ದ ಖಾದರ್ ಪಾಷ ಅವರನ್ನೇ ನೇಮಿಸಿ ಸರಕಾರ ಆದೇಶ ಹೊರಡಿಸಿರುವುದು (ಅದು ಖಾಲಿ ಇಲ್ಲದ ಹುದ್ದೆಗೆ) ಆಶ್ಚರ್ಯಕ್ಕೆ ಎಡೆಮಾಡಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!