ಮೈಸೂರು

ಗೊಂದಲಕ್ಕೆ ಎಡೆಮಾಡಿಕೊಟ್ಟಿರುವ ಕೆ ಎಸ್‌ ಒ ಯು ಹಣಕಾಸು ಅಧಿಕಾರಿ ವರ್ಗಾವಣೆ

ಮೈಸೂರು :  ಕರ್ನಾಟಕ ರಾಜ್ಯ ಮುಕ್ತ ವಿವಿ ಹಣಕಾಸು ಅಧಿಕಾರಿ ಖಾದರ್ ಪಾಷ ಅವರನ್ನು ಆರ್ಥಿಕ ಇಲಾಖೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಗೊಂದಲಕ್ಕೆ ಎಡೆಮಾಡಿದೆ.

ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಸ್ತುತ ನಿಯೋಜನೆ ಮೇಲೆ ಕೆಎಸ್ಒಯು ಹಣಕಾಸು ಅಧಿಕಾರಿಯಾಗಿರುವ ಖಾದರ್ ಪಾಷ ಅವರನ್ನು ಆಡಾಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಆಡಿಷನಲ್ ಡೈರಕ್ಟರ್  ಪ್ರಾದೇಶಿಕ ಕಚೇರಿ  ಮೈಸೂರು. ಇಲ್ಲಿಗೆ ಸ್ವಂತ ವೇತನ ಶ್ರೇಣಿ ಮೇಲೆ ವರ್ಗಾಯಿಸಿ ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ.ಧಾಯಪುಲೆ  ನ.10 ರಂದು ಆದೇಶ ಹೊರಡಿಸಿದ್ದಾರೆ.

ವಿಪರ್ಯಾಸವೆಂದರೆ, ಈ ಹುದ್ದೆಯಲ್ಲಿ ಈಗಾಗಲೇ ಹಾಲಿ ಸಿದ್ದರಾಜು ಎಂಬುವವರು ಕರ್ತವ್ಯ ನಿರ್ವಹಿಸುತ್ತಿದ್ದು, ಹುದ್ದೆ ಖಾಲಿ ಇಲ್ಲ. ಜತೆಗೆ ಸಿದ್ದರಾಜು ಅವರನ್ನು ವರ್ಗಾಯಿಸಿರುವ ಬಗೆಗೂ ಆದೇಶದಲ್ಲಿ ಸ್ಪಷ್ಟ ಮಾಹಿತಿ ಇಲ್ಲ. ಇದು ಗೊಂದಲಕ್ಕೆ ಎಡೆಮಾಡಿದೆ.

ಪ್ರಮುಖವಾಗಿ, ಈ ಹಿಂದೆ (ಖಾದರ್ ಪಾಷ ಅವರ ಅವಧಿ ಸೇರಿದಂತೆ ) ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಕೇಳಿ ಬಂದಿದ್ದ ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಖರ್ಚು, ವೆಚ್ಚದ ಬಗ್ಗೆ ಆಡಿಟ್ ನಡೆಸಲು ಸಿದ್ದರಾಜು ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಅದೇ ಹುದ್ದೆಗೆ ಆರೋಪ ಕೇಳಿ ಬಂದಿದ್ದ ಖಾದರ್ ಪಾಷ ಅವರನ್ನೇ ನೇಮಿಸಿ ಸರಕಾರ ಆದೇಶ ಹೊರಡಿಸಿರುವುದು (ಅದು ಖಾಲಿ ಇಲ್ಲದ ಹುದ್ದೆಗೆ) ಆಶ್ಚರ್ಯಕ್ಕೆ ಎಡೆಮಾಡಿದೆ.

 

andolana

Recent Posts

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

29 mins ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

31 mins ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

34 mins ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

36 mins ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

38 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

53 mins ago