ಮೈಸೂರು

ಕೆಎಸ್‌ಓಯು ಪಿಎಚ್‌ಡಿ ಪರೀಕ್ಷೆ ಕೀ-ಉತ್ತರಗಳೇ ತಪ್ಪು?; ಮರು ಪರೀಕ್ಷೆ ಯಾವಾಗ?

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್‌ಓಯು) 2023-24ನೇ ಸಾಲಿನ (ಜನವರಿ ಆವೃತ್ತಿ) ಪತ್ರಿಕೋದ್ಯಮ ವಿಷಯದ ಪಿ.ಹೆಚ್.ಡಿ ಪರೀಕ್ಷೆಯ CET Series-D ಪ್ರಶ್ನೆಪತ್ರಿಕೆಗೆ ಸಂಬಂಧಿಸಿದಂತೆ ತಪ್ಪು ಕೀ-ಉತ್ತರಗಳನ್ನು ಪ್ರಕಟಿಸಿ ಎಂದು ಹರೀಶ್‌ ಕುಮಾರ್‌ ಎಂಬುವವರು ದೂರು ನೀಡಿದ್ದಾರೆ.

ಪಿಎಚ್‌ಡಿ ಪತ್ರಿಕೋದ್ಯಮ ವಿಷಯಕ್ಕೆ ಸಂಬಂಧಿಸಿದಂತೆ ಎನ್. ಹರೀಶ್ ಕುಮಾರ್ ಎಂಬುವವರು ಮುಕ್ತ ವಿವಿಗೆ ಪತ್ರ ಬರೆಯುವ ಮೂಲಕ ಪರೀಕ್ಷಾ ಲೋಪವನ್ನು ಬಿಚ್ಚಿಟ್ಟಿದ್ದಾರೆ.

ಇದೇ ಮಾ.17 ರಂದು ಪತ್ರಿಕೋದ್ಯಮ ವಿಷಯದಲ್ಲಿ ಪಿ.ಹೆಚ್.ಡಿ ಪ್ರವೇಶ ಪರೀಕ್ಷೆ ನಡೆಸಲಾಗಿದ್ದು, ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಕೆಎಸ್‌ಓಯು ಅಂತರ್ಜಾಲದಲ್ಲಿ ಪ್ರಕಟಿಸಿದೆ. ಆದರೆ ಪ್ರಕಟಿಸಿರುವ CET Series-D (ಪತ್ರಿಕೋದ್ಯಮ ವಿಷಯ) ಕೀ-ಉತ್ತರಗಳು ತಪ್ಪಾಗಿರುವುದು ಹರೀಶ್‌ ಗಮನಕ್ಕೆ ಬಂದಿದೆ.

ಕೆ.ಎಸ್.ಒ.ಯು ಅಂತರ್ಜಾಲದಲ್ಲಿ ತಪ್ಪಾಗಿ ಪ್ರಕಟಿಸಿರುವ ಕೀ-ಉತ್ತರಗಳನ್ನು ಪ್ರಶ್ನೆ ಸಂಖ್ಯೆ ಸಮೇತ ಪಟ್ಟಿ ಮಾಡಿ ವಿವರ ಸಹಿತ ವಿಶ್ವವಿದ್ಯಾಲಯದ ಗಮನಕ್ಕೆ ತಂದಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿವಿಯಂತ ಉನ್ನತ ಸಂಸ್ಥೆಯೇ ಈ ರೀತಿ ಪ್ರಶ್ನೆಗಳಿಗೆ ತಪ್ಪು ಕೀ-ಉತ್ತರಗಳನ್ನು ಪ್ರಕಟ ಮಾಡಿರುವುದು ದಿಗ್ಧಮೆ ತಂದಿದೆ ಎಂದು ದೂರುದಾರ ಹರೀಶ್‌ ಆತಂಕ ವ್ಯಕ್ತಪಡಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago