ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್ಓಯು) 2023-24ನೇ ಸಾಲಿನ (ಜನವರಿ ಆವೃತ್ತಿ) ಪತ್ರಿಕೋದ್ಯಮ ವಿಷಯದ ಪಿ.ಹೆಚ್.ಡಿ ಪರೀಕ್ಷೆಯ CET Series-D ಪ್ರಶ್ನೆಪತ್ರಿಕೆಗೆ ಸಂಬಂಧಿಸಿದಂತೆ ತಪ್ಪು ಕೀ-ಉತ್ತರಗಳನ್ನು ಪ್ರಕಟಿಸಿ ಎಂದು ಹರೀಶ್ ಕುಮಾರ್ ಎಂಬುವವರು ದೂರು ನೀಡಿದ್ದಾರೆ.
ಪಿಎಚ್ಡಿ ಪತ್ರಿಕೋದ್ಯಮ ವಿಷಯಕ್ಕೆ ಸಂಬಂಧಿಸಿದಂತೆ ಎನ್. ಹರೀಶ್ ಕುಮಾರ್ ಎಂಬುವವರು ಮುಕ್ತ ವಿವಿಗೆ ಪತ್ರ ಬರೆಯುವ ಮೂಲಕ ಪರೀಕ್ಷಾ ಲೋಪವನ್ನು ಬಿಚ್ಚಿಟ್ಟಿದ್ದಾರೆ.
ಇದೇ ಮಾ.17 ರಂದು ಪತ್ರಿಕೋದ್ಯಮ ವಿಷಯದಲ್ಲಿ ಪಿ.ಹೆಚ್.ಡಿ ಪ್ರವೇಶ ಪರೀಕ್ಷೆ ನಡೆಸಲಾಗಿದ್ದು, ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಕೆಎಸ್ಓಯು ಅಂತರ್ಜಾಲದಲ್ಲಿ ಪ್ರಕಟಿಸಿದೆ. ಆದರೆ ಪ್ರಕಟಿಸಿರುವ CET Series-D (ಪತ್ರಿಕೋದ್ಯಮ ವಿಷಯ) ಕೀ-ಉತ್ತರಗಳು ತಪ್ಪಾಗಿರುವುದು ಹರೀಶ್ ಗಮನಕ್ಕೆ ಬಂದಿದೆ.
ಕೆ.ಎಸ್.ಒ.ಯು ಅಂತರ್ಜಾಲದಲ್ಲಿ ತಪ್ಪಾಗಿ ಪ್ರಕಟಿಸಿರುವ ಕೀ-ಉತ್ತರಗಳನ್ನು ಪ್ರಶ್ನೆ ಸಂಖ್ಯೆ ಸಮೇತ ಪಟ್ಟಿ ಮಾಡಿ ವಿವರ ಸಹಿತ ವಿಶ್ವವಿದ್ಯಾಲಯದ ಗಮನಕ್ಕೆ ತಂದಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿವಿಯಂತ ಉನ್ನತ ಸಂಸ್ಥೆಯೇ ಈ ರೀತಿ ಪ್ರಶ್ನೆಗಳಿಗೆ ತಪ್ಪು ಕೀ-ಉತ್ತರಗಳನ್ನು ಪ್ರಕಟ ಮಾಡಿರುವುದು ದಿಗ್ಧಮೆ ತಂದಿದೆ ಎಂದು ದೂರುದಾರ ಹರೀಶ್ ಆತಂಕ ವ್ಯಕ್ತಪಡಿಸಿದ್ದಾರೆ.
ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…