ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್ಓಯು) 2023-24ನೇ ಸಾಲಿನ (ಜನವರಿ ಆವೃತ್ತಿ) ಪತ್ರಿಕೋದ್ಯಮ ವಿಷಯದ ಪಿ.ಹೆಚ್.ಡಿ ಪರೀಕ್ಷೆಯ CET Series-D ಪ್ರಶ್ನೆಪತ್ರಿಕೆಗೆ ಸಂಬಂಧಿಸಿದಂತೆ ತಪ್ಪು ಕೀ-ಉತ್ತರಗಳನ್ನು ಪ್ರಕಟಿಸಿ ಎಂದು ಹರೀಶ್ ಕುಮಾರ್ ಎಂಬುವವರು ದೂರು ನೀಡಿದ್ದಾರೆ.
ಪಿಎಚ್ಡಿ ಪತ್ರಿಕೋದ್ಯಮ ವಿಷಯಕ್ಕೆ ಸಂಬಂಧಿಸಿದಂತೆ ಎನ್. ಹರೀಶ್ ಕುಮಾರ್ ಎಂಬುವವರು ಮುಕ್ತ ವಿವಿಗೆ ಪತ್ರ ಬರೆಯುವ ಮೂಲಕ ಪರೀಕ್ಷಾ ಲೋಪವನ್ನು ಬಿಚ್ಚಿಟ್ಟಿದ್ದಾರೆ.
ಇದೇ ಮಾ.17 ರಂದು ಪತ್ರಿಕೋದ್ಯಮ ವಿಷಯದಲ್ಲಿ ಪಿ.ಹೆಚ್.ಡಿ ಪ್ರವೇಶ ಪರೀಕ್ಷೆ ನಡೆಸಲಾಗಿದ್ದು, ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಕೆಎಸ್ಓಯು ಅಂತರ್ಜಾಲದಲ್ಲಿ ಪ್ರಕಟಿಸಿದೆ. ಆದರೆ ಪ್ರಕಟಿಸಿರುವ CET Series-D (ಪತ್ರಿಕೋದ್ಯಮ ವಿಷಯ) ಕೀ-ಉತ್ತರಗಳು ತಪ್ಪಾಗಿರುವುದು ಹರೀಶ್ ಗಮನಕ್ಕೆ ಬಂದಿದೆ.
ಕೆ.ಎಸ್.ಒ.ಯು ಅಂತರ್ಜಾಲದಲ್ಲಿ ತಪ್ಪಾಗಿ ಪ್ರಕಟಿಸಿರುವ ಕೀ-ಉತ್ತರಗಳನ್ನು ಪ್ರಶ್ನೆ ಸಂಖ್ಯೆ ಸಮೇತ ಪಟ್ಟಿ ಮಾಡಿ ವಿವರ ಸಹಿತ ವಿಶ್ವವಿದ್ಯಾಲಯದ ಗಮನಕ್ಕೆ ತಂದಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿವಿಯಂತ ಉನ್ನತ ಸಂಸ್ಥೆಯೇ ಈ ರೀತಿ ಪ್ರಶ್ನೆಗಳಿಗೆ ತಪ್ಪು ಕೀ-ಉತ್ತರಗಳನ್ನು ಪ್ರಕಟ ಮಾಡಿರುವುದು ದಿಗ್ಧಮೆ ತಂದಿದೆ ಎಂದು ದೂರುದಾರ ಹರೀಶ್ ಆತಂಕ ವ್ಯಕ್ತಪಡಿಸಿದ್ದಾರೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…