ಮೈಸೂರು

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಪುನರ್ ಪರಿಶೀಲನೆ ಮಾಡುವಂತೆ ರೈಲ್ವೆ ಇಲಾಖೆಯ ಗಮನಕ್ಕೆ ತಂದಿದ್ದೇನೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗಕ್ಕೆ ರೈಲ್ವೆ ಯೋಜನೆ ಅಗತ್ಯವಿದೆ. ಮೈಸೂರು-ಕೊಡಗು ಜನರ ಹಿತದೃಷ್ಟಿಯಿಂದ ಯೋಜನೆ ಅನುಷ್ಠಾನಗೊಳ್ಳಬೇಕು. ಮತ್ತೊಮ್ಮೆ ಕೇಂದ್ರದ ಗಮನ ಸೆಳೆಯುತ್ತೇನೆ. ರಾಜ್ಯ ಸರ್ಕಾರ ಕೂಡ ಇದಕ್ಕೆ ಸಹಕಾರ ನೀಡಬೇಕು ಎಂದರು.

ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಸರಿಯಾಗಿ ಪತ್ರ ವ್ಯವಹಾರ ಮಾಡದ ಹಿನ್ನೆಲೆ ಈ ಬಾರಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರ ಭಾಗವಹಿಸುತ್ತಿಲ್ಲ. ಸ್ತಬ್ಧಚಿತ್ರ ಕಳಿಸುವ ಸಂಬಂಧ ರಾಜ್ಯ ಸರ್ಕಾರದಿಂದ ಸಮರ್ಪಕವಾಗಿ ಪತ್ರ ವ್ಯವಹಾರ ನಡೆದಿಲ್ಲ. ಹೀಗಾಗಿ ಸಾಕಷ್ಟು ಗೊಂದಲ ಉಂಟಾಗಿತ್ತು. ಈ ಹಿನ್ನೆಲೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಮ್ಮ ರಾಜ್ಯದ ಸ್ತಬ್ಧಚಿತ್ರ ಇರುವುದಿಲ್ಲ ಎಂದು ಹೇಳಿದರು.

ಬಳ್ಳಾರಿಯಲ್ಲಿ ಮತ್ತೊಮ್ಮೆ ಗಲಾಟೆ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಧೆ ಸಂಪೂರ್ಣ ಹದಗೆಟ್ಟಿದೆ. ಈ ಬಗ್ಗೆ ಹೋರಾಟ ಕೂಡ ಮಾಡಿದ್ದೇವೆ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದರು.

ಚಾಮುಂಡಿ ಬೆಟ್ಟದ ‘ಪ್ರಸಾದ್’ ಕಾಮಗಾರಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಮಾತನಾಡಿ, ಅಲ್ಲಿನ ಗ್ರಾಮಸ್ಥರು ವಿರೋಧ ಮಾಡಿದ್ದಾರೆ. ಬೆಟ್ಟದ ದೇಗುಲದ ಪಕ್ಕದಲ್ಲೇ ಕಾಮಗಾರಿ ನಡೆಯುತ್ತಿದೆ.
ಸುತ್ತಮುತ್ತಲಿನ ಕಾಮಗಾರಿಯಿಂದ ಗೋಪುರಕ್ಕೆ ತೊಂದರೆಯಾಗಬಹುದು ಅಂಬ ಆತಂಕವಿದೆ.

ಈ ಹಿಂದೆ ಯಾವ ರೀತಿ ಕಾಮಗಾರಿ ಮಾಡಿದ್ದಾರೆ ಎಂಬುದನ್ನು ತಿಳಿಯಲಿ. ನಂತರ ಕಾಮಗಾರಿ ಮುಂದುವರೆಸಲಿ. ಚಾಮುಂಡಿ ಬೆಟ್ಟದ ಅಭಿವೃದ್ಧಿ ಕೂಡ ಆಗಬೇಕಿದೆ. ಪರಿಸರವನ್ನು ಸಂರಕ್ಷಿಸಬೇಕಿದೆ. ನನ್ನ ಅನುಮತಿಗಿಂತ ಕಾಮಗಾರಿಗೆ ವಿರೋಧ ಮಾಡಿರುವವರ ಅನುಮತಿ ತುಂಬಾ ಮುಖ್ಯ. ಅಧಿಕಾರಿಗಳು ತರಾತುರಿಯಲ್ಲಿ ಕಾಮಗಾರಿ ಮಾಡುತ್ತಿರುವುದು ಯಾಕೆ? ಎಂಬುದು ಗೊತ್ತಿಲ್ಲ. ಜನರ ಅಭಿಪ್ರಾಯವನ್ನು ಪಡೆದು ಕಾಮಗಾರಿ ಮುಂದುವರೆಸಲಿ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

17 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

17 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

17 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

17 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

17 hours ago