ಮೈಸೂರು

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಪುನರ್ ಪರಿಶೀಲನೆ ಮಾಡುವಂತೆ ರೈಲ್ವೆ ಇಲಾಖೆಯ ಗಮನಕ್ಕೆ ತಂದಿದ್ದೇನೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗಕ್ಕೆ ರೈಲ್ವೆ ಯೋಜನೆ ಅಗತ್ಯವಿದೆ. ಮೈಸೂರು-ಕೊಡಗು ಜನರ ಹಿತದೃಷ್ಟಿಯಿಂದ ಯೋಜನೆ ಅನುಷ್ಠಾನಗೊಳ್ಳಬೇಕು. ಮತ್ತೊಮ್ಮೆ ಕೇಂದ್ರದ ಗಮನ ಸೆಳೆಯುತ್ತೇನೆ. ರಾಜ್ಯ ಸರ್ಕಾರ ಕೂಡ ಇದಕ್ಕೆ ಸಹಕಾರ ನೀಡಬೇಕು ಎಂದರು.

ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಸರಿಯಾಗಿ ಪತ್ರ ವ್ಯವಹಾರ ಮಾಡದ ಹಿನ್ನೆಲೆ ಈ ಬಾರಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರ ಭಾಗವಹಿಸುತ್ತಿಲ್ಲ. ಸ್ತಬ್ಧಚಿತ್ರ ಕಳಿಸುವ ಸಂಬಂಧ ರಾಜ್ಯ ಸರ್ಕಾರದಿಂದ ಸಮರ್ಪಕವಾಗಿ ಪತ್ರ ವ್ಯವಹಾರ ನಡೆದಿಲ್ಲ. ಹೀಗಾಗಿ ಸಾಕಷ್ಟು ಗೊಂದಲ ಉಂಟಾಗಿತ್ತು. ಈ ಹಿನ್ನೆಲೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಮ್ಮ ರಾಜ್ಯದ ಸ್ತಬ್ಧಚಿತ್ರ ಇರುವುದಿಲ್ಲ ಎಂದು ಹೇಳಿದರು.

ಬಳ್ಳಾರಿಯಲ್ಲಿ ಮತ್ತೊಮ್ಮೆ ಗಲಾಟೆ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಧೆ ಸಂಪೂರ್ಣ ಹದಗೆಟ್ಟಿದೆ. ಈ ಬಗ್ಗೆ ಹೋರಾಟ ಕೂಡ ಮಾಡಿದ್ದೇವೆ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದರು.

ಚಾಮುಂಡಿ ಬೆಟ್ಟದ ‘ಪ್ರಸಾದ್’ ಕಾಮಗಾರಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಮಾತನಾಡಿ, ಅಲ್ಲಿನ ಗ್ರಾಮಸ್ಥರು ವಿರೋಧ ಮಾಡಿದ್ದಾರೆ. ಬೆಟ್ಟದ ದೇಗುಲದ ಪಕ್ಕದಲ್ಲೇ ಕಾಮಗಾರಿ ನಡೆಯುತ್ತಿದೆ.
ಸುತ್ತಮುತ್ತಲಿನ ಕಾಮಗಾರಿಯಿಂದ ಗೋಪುರಕ್ಕೆ ತೊಂದರೆಯಾಗಬಹುದು ಅಂಬ ಆತಂಕವಿದೆ.

ಈ ಹಿಂದೆ ಯಾವ ರೀತಿ ಕಾಮಗಾರಿ ಮಾಡಿದ್ದಾರೆ ಎಂಬುದನ್ನು ತಿಳಿಯಲಿ. ನಂತರ ಕಾಮಗಾರಿ ಮುಂದುವರೆಸಲಿ. ಚಾಮುಂಡಿ ಬೆಟ್ಟದ ಅಭಿವೃದ್ಧಿ ಕೂಡ ಆಗಬೇಕಿದೆ. ಪರಿಸರವನ್ನು ಸಂರಕ್ಷಿಸಬೇಕಿದೆ. ನನ್ನ ಅನುಮತಿಗಿಂತ ಕಾಮಗಾರಿಗೆ ವಿರೋಧ ಮಾಡಿರುವವರ ಅನುಮತಿ ತುಂಬಾ ಮುಖ್ಯ. ಅಧಿಕಾರಿಗಳು ತರಾತುರಿಯಲ್ಲಿ ಕಾಮಗಾರಿ ಮಾಡುತ್ತಿರುವುದು ಯಾಕೆ? ಎಂಬುದು ಗೊತ್ತಿಲ್ಲ. ಜನರ ಅಭಿಪ್ರಾಯವನ್ನು ಪಡೆದು ಕಾಮಗಾರಿ ಮುಂದುವರೆಸಲಿ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

15 mins ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

16 mins ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

1 hour ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

1 hour ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

2 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

3 hours ago