Mysore
19
overcast clouds
Light
Dark

ಮೈಸೂರು: ಚಿರತೆ ದಾಳಿಗೆ ಹಸು ಸಾವು

ಮೈಸೂರು: ಹೊಲದಲ್ಲಿ ಹಸು ಮೇಯುವಾಗ ಚಿರತೆ ದಾಳಿ ಮಾಡಿ ಹಸು ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ದೇವಿತಂದ್ರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ಮಹೇಶ್‌ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದೆ. ಚಿರತೆ ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.