ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ ಚಿರತೆ ಸಾವಿಗೀಡಾಗಿರುವ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಇಂದು ಬೆಳಗ್ಗೆ ಎರಡು ವರ್ಷ ವಯಸ್ಸಿನ ಹೆಣ್ಣು ಚಿರತೆಯೊಂದು ಗುಂಡೇಟಿನಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ವನ್ಯಜೀವಿ ಅಂಗಾಂಗಕ್ಕಾಗಿ ಕಳ್ಳಬೇಟೆ ಇನ್ನೂ ನಡೆಯುತ್ತಿದೆ ಎಂಬುದಕ್ಕೆ ಪುಷ್ಟಿ ನೀಡುತ್ತಿದೆ ಈ ನಿಟ್ಟಿನಲ್ಲಿ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.
ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ ಡಾ. ಆದರ್ಶ್, ಚಿರತೆಯ ದೇಹದೊಳಗೆ ಮೂರು ಗುಂಡುಗಳು ಪತ್ತೆಯಾಗಿವೆ ಎಂದು ವರದಿ ಮಾಡಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ವನ್ಯಜೀವಿ ಕಳ್ಳಬೇಟೆಗಾರರನ್ನು ಪತ್ತೆ ಹಚ್ಚಿ ಕಾನೂನು ರೀತ್ಯ ಶಿಕ್ಷೆ ಕೊಡಿಸಲು ಮತ್ತು ಈ ವಲಯದಲ್ಲಿ ಗಸ್ತು ವೈಫಲ್ಯವಾಗಿದ್ದಲ್ಲಿ ಸಂಬಂಧಿತ ಗಸ್ತು ಸಿಬ್ಬಂದಿಯ ಮೇಲೆ ಶಿಸ್ತುಕ್ರಮ ಜರುಗಿಸಲು ಹಾಗೂ ಅರಣ್ಯ ಅಪರಾಧ ನಿಯಂತ್ರಣ ಕೋಶವನ್ನು ಹೆಚ್ಚು ಸಕ್ರಿಯಗೊಳಿಸಲು ಸೂಚನೆ ನೀಡಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…