ಮೈಸೂರು: ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ನಡೆದ ಚಿರತೆ ಸೆರೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯು ಇಂದು(ಜ.15) ಸ್ಥಗಿತಗೊಳಿಸಿದೆ.
ಡಿ.31ರಂದು ಕ್ಯಾಂಪಸ್ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಹೀಗಾಗಿ ಕಂಪನಿಯು ಬಹುತೇಕ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸಕ್ಕೆ ಸೂಚಿಸಿತ್ತು. ಬಳಿಕ ಅರಣ್ಯ ಇಲಾಖೆಯು ತಂಡ ರಚಿಸಿಕೊಂಡು ಕಾರ್ಯಚರಣೆ ನಡೆಸಿಸುತ್ತಿತ್ತು. ಚಿರತೆ ಕಾರ್ಯಚರಣೆಗೆ ಅಲ್ಲಲ್ಲಿ ಕ್ಯಾಮಾರ, ಡ್ರೋನ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಆದರೆ, 10 ದಿನವಾದರೂ ಚಿರತೆಯ ಹೆಚ್ಚೆ ಗುರುತು ಎಲ್ಲೂ ಕಾಣಿಸಿಲ್ಲ. ಇದರ ಕುರುಹುಗಳು ಸಿಕ್ಕಿಲ್ಲ. ಹೀಗಾಗಿ, ಅರಣ್ಯ ಇಲಾಖೆಯು ತನ್ನ ಕಾರ್ಯಚರಣೆಯನ್ನು ನಿಲ್ಲಿಸಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು ತಿಳಿಸಿದ್ದಾರೆ.
ಇಂತಹ ಪ್ರಕರಣಗಳು ಮರುಕಳಿಸದಂತೆ ಇನ್ಛೋಸಿಸ್ ಕ್ಯಾಂಪಸ್ ಅನ್ನು ಬಲವರ್ಧನೆಗೊಳಿಸುವ ಬಗ್ಗೆ ಹಾಗೂ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದೇವೆ. ಜತೆಗೆ, ರಾತ್ರಿ ವೇಳೆ ಥರ್ಮಲ್ ಡ್ರೋಣ್ ಬಳಸಿ ಕ್ಯಾಂಪಸ್ನಲ್ಲಿ ನಿರಂತರ ನಿಗಾವಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…