ಮೈಸೂರು: ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ನಡೆದ ಚಿರತೆ ಸೆರೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯು ಇಂದು(ಜ.15) ಸ್ಥಗಿತಗೊಳಿಸಿದೆ.
ಡಿ.31ರಂದು ಕ್ಯಾಂಪಸ್ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಹೀಗಾಗಿ ಕಂಪನಿಯು ಬಹುತೇಕ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸಕ್ಕೆ ಸೂಚಿಸಿತ್ತು. ಬಳಿಕ ಅರಣ್ಯ ಇಲಾಖೆಯು ತಂಡ ರಚಿಸಿಕೊಂಡು ಕಾರ್ಯಚರಣೆ ನಡೆಸಿಸುತ್ತಿತ್ತು. ಚಿರತೆ ಕಾರ್ಯಚರಣೆಗೆ ಅಲ್ಲಲ್ಲಿ ಕ್ಯಾಮಾರ, ಡ್ರೋನ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಆದರೆ, 10 ದಿನವಾದರೂ ಚಿರತೆಯ ಹೆಚ್ಚೆ ಗುರುತು ಎಲ್ಲೂ ಕಾಣಿಸಿಲ್ಲ. ಇದರ ಕುರುಹುಗಳು ಸಿಕ್ಕಿಲ್ಲ. ಹೀಗಾಗಿ, ಅರಣ್ಯ ಇಲಾಖೆಯು ತನ್ನ ಕಾರ್ಯಚರಣೆಯನ್ನು ನಿಲ್ಲಿಸಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು ತಿಳಿಸಿದ್ದಾರೆ.
ಇಂತಹ ಪ್ರಕರಣಗಳು ಮರುಕಳಿಸದಂತೆ ಇನ್ಛೋಸಿಸ್ ಕ್ಯಾಂಪಸ್ ಅನ್ನು ಬಲವರ್ಧನೆಗೊಳಿಸುವ ಬಗ್ಗೆ ಹಾಗೂ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದೇವೆ. ಜತೆಗೆ, ರಾತ್ರಿ ವೇಳೆ ಥರ್ಮಲ್ ಡ್ರೋಣ್ ಬಳಸಿ ಕ್ಯಾಂಪಸ್ನಲ್ಲಿ ನಿರಂತರ ನಿಗಾವಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…