ಮೈಸೂರು

ಮೈಸೂರು | ಕುಡಿಯಲು ಹಣ ನಿಡಲಿಲ್ಲವೆಂದು ಮನೆಗೆ ಬೆಂಕಿ ಹಚ್ಚಿದ ಭೂಪ

ಮೈಸೂರು : ಕುಡಿಯಲು ಹಣ ನೀಡದ ಹಿನ್ನೆಲೆಯಲ್ಲಿ ಮನೆಗೆ ಬೆಂಕಿ ಹಚ್ಚಿದ ಭೂಪ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ತಾಲ್ಲೂಕಿನ ರಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಹಚ್ಚಿ ಪರಾರಿಯಾಗಿದ್ದ ಭೂಪನನ್ನು ಎನ್.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿವಪ್ರಸಾದ್(26) ಮನೆಗೆ ಬೆಂಕಿ ಹಚ್ಚಿ ಪೊಲೀಸರ ಅತಿಥಿಯಾದ ಯುವಕನಾಗಿದ್ದಾನೆ. ಹೆತ್ತ ತಾಯಿ ಕಲಾವತಿ ಅವರು ರಮ್ಮನಹಳ್ಳಿಯಲ್ಲಿ ಸಣ್ಣ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ. ಪತಿ ಎರಡನೇ ಮದುವೆ ಮಾಡಿಕೊಂಡು ಪ್ರತ್ಯೇಕ ಸಂಸಾರ ನಡೆಸುತ್ತಿದ್ದಾರೆ. ಕಲಾವತಿಗೆ ಇಬ್ಬರು ಮಕ್ಕಳಿದ್ದು, ಅದರಲ್ಲಿ ಎರಡನೇ ಮಗನೇ ಶಿವಪ್ರಸಾದ್ ಕುಡಿತದ ಚಟಕ್ಕೆ ದಾಸನಾಗಿದ್ದ. ಆತ ಆಗಾಗ ತಾಯಿಗೆ ಕಿರುಕುಳ ನೀಡಿ ಹಣ ಕಿತ್ತುಕೊಂಡು ಹೋಗುತ್ತಿದ್ದನು. ಎರಡು ದಿನಗಳ ಹಿಂದೆ ಶಿವಪ್ರಸಾದ್ ಕುಡಿಯಲು ಹಣ ಕೇಳಿದ್ದಾನೆ. ಕಲಾವತಿ ಅವರು ಹಣ ನೀಡುವುದಿಲ್ಲವೆಂದು ನಿರಾಕರಿಸಿದ್ದಾರೆ. ಇದರಿಂದ ಜಗಳ ತೆಗೆದ ಶಿವಪ್ರಸಾದ್ ಮನೆಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾನೆ. ಮನೆಯಿಂದ ಹೊರಬಂದು ತೆಂಗಿನ ಗರಿಗೆ ಬೆಂಕಿ ಹಚ್ಚಿದ್ದಾನೆ. ಕೆಲ ಸಮಯದಲ್ಲಿ ಪೆಟ್ರೋಲ್ ಸುರಿದು ಬೆಂಕಿ ವ್ಯಾಪಿಸುವಂತೆ ಮಾಡಿ ನಾಪತ್ತೆಯಾಗಿದ್ದಾನೆ. ನೆರೆಹೊರೆಯವರು ಕಲಾವತಿ ಅವರನ್ನು ಮನೆಯಿಂದ ಹೊರ ತಂದು ಬಚಾವ್ ಮಾಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ, ಬೆಂಕಿ ಅನಾಹುತದಿಂದಾಗಿ ಮನೆಯಲ್ಲಿದ್ದ ಪದಾರ್ಥಗಳೆಲ್ಲಾ ನಾಶವಾಗಿದೆ. 60 ಸಾವಿರ ರೂ. ಮೌಲ್ಯದ ಪದಾರ್ಥಗಳು ನಾಶವಾಗಿದೆ. ಈ ಸಂಬಂಧ ಎನ್.ಆರ್.ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

6 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

7 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

7 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

7 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

8 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

8 hours ago