ಮೈಸೂರು

ಮೈಸೂರು | ಕುಡಿಯಲು ಹಣ ನಿಡಲಿಲ್ಲವೆಂದು ಮನೆಗೆ ಬೆಂಕಿ ಹಚ್ಚಿದ ಭೂಪ

ಮೈಸೂರು : ಕುಡಿಯಲು ಹಣ ನೀಡದ ಹಿನ್ನೆಲೆಯಲ್ಲಿ ಮನೆಗೆ ಬೆಂಕಿ ಹಚ್ಚಿದ ಭೂಪ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ತಾಲ್ಲೂಕಿನ ರಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಹಚ್ಚಿ ಪರಾರಿಯಾಗಿದ್ದ ಭೂಪನನ್ನು ಎನ್.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿವಪ್ರಸಾದ್(26) ಮನೆಗೆ ಬೆಂಕಿ ಹಚ್ಚಿ ಪೊಲೀಸರ ಅತಿಥಿಯಾದ ಯುವಕನಾಗಿದ್ದಾನೆ. ಹೆತ್ತ ತಾಯಿ ಕಲಾವತಿ ಅವರು ರಮ್ಮನಹಳ್ಳಿಯಲ್ಲಿ ಸಣ್ಣ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ. ಪತಿ ಎರಡನೇ ಮದುವೆ ಮಾಡಿಕೊಂಡು ಪ್ರತ್ಯೇಕ ಸಂಸಾರ ನಡೆಸುತ್ತಿದ್ದಾರೆ. ಕಲಾವತಿಗೆ ಇಬ್ಬರು ಮಕ್ಕಳಿದ್ದು, ಅದರಲ್ಲಿ ಎರಡನೇ ಮಗನೇ ಶಿವಪ್ರಸಾದ್ ಕುಡಿತದ ಚಟಕ್ಕೆ ದಾಸನಾಗಿದ್ದ. ಆತ ಆಗಾಗ ತಾಯಿಗೆ ಕಿರುಕುಳ ನೀಡಿ ಹಣ ಕಿತ್ತುಕೊಂಡು ಹೋಗುತ್ತಿದ್ದನು. ಎರಡು ದಿನಗಳ ಹಿಂದೆ ಶಿವಪ್ರಸಾದ್ ಕುಡಿಯಲು ಹಣ ಕೇಳಿದ್ದಾನೆ. ಕಲಾವತಿ ಅವರು ಹಣ ನೀಡುವುದಿಲ್ಲವೆಂದು ನಿರಾಕರಿಸಿದ್ದಾರೆ. ಇದರಿಂದ ಜಗಳ ತೆಗೆದ ಶಿವಪ್ರಸಾದ್ ಮನೆಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾನೆ. ಮನೆಯಿಂದ ಹೊರಬಂದು ತೆಂಗಿನ ಗರಿಗೆ ಬೆಂಕಿ ಹಚ್ಚಿದ್ದಾನೆ. ಕೆಲ ಸಮಯದಲ್ಲಿ ಪೆಟ್ರೋಲ್ ಸುರಿದು ಬೆಂಕಿ ವ್ಯಾಪಿಸುವಂತೆ ಮಾಡಿ ನಾಪತ್ತೆಯಾಗಿದ್ದಾನೆ. ನೆರೆಹೊರೆಯವರು ಕಲಾವತಿ ಅವರನ್ನು ಮನೆಯಿಂದ ಹೊರ ತಂದು ಬಚಾವ್ ಮಾಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ, ಬೆಂಕಿ ಅನಾಹುತದಿಂದಾಗಿ ಮನೆಯಲ್ಲಿದ್ದ ಪದಾರ್ಥಗಳೆಲ್ಲಾ ನಾಶವಾಗಿದೆ. 60 ಸಾವಿರ ರೂ. ಮೌಲ್ಯದ ಪದಾರ್ಥಗಳು ನಾಶವಾಗಿದೆ. ಈ ಸಂಬಂಧ ಎನ್.ಆರ್.ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಸ್ತುತ ದಲಿತ ರಾಜಕಾರಣದಲ್ಲಿ ಮಹದೇವಪ್ಪ ಎಂಬ ವಿದ್ಯಮಾನ

ರಮೇಶ್‌ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…

29 mins ago

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

50 mins ago

ಅಮೆರಿಕ ವಶವಾದ ಇರಾನ್‌ ಹಡಗು ; ಸಶಸ್ತ್ರ ಕಡಲ್ಗಳ್ಳತನ ಎಂದ ಇರಾನ್‌

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…

1 hour ago

ದಲಿತ ಚಿಂತಕ ಧೀಮಂತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರ ಹೋರಾಟದ ಕತೆ……

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು…

2 hours ago

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

5 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

5 hours ago