ಮೈಸೂರು: ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದಲ್ಲಿ ಅರೇಬಿಕ್ ಶಾಲೆ ತೆರೆಯಲು ಮೈಸೂರು ಜಿಲ್ಲಾಧಿಕಾರ ಅನುಮತಿ ನೀಡಿದ ಹಿನ್ನೆಲೆ ಇಲ್ಲಿನ ಮುಖಂಡರು ಹಾಗೂ ಗ್ರಾಮಸ್ಥರು ಸಭೆ ನಡೆಸಿದ್ದಾರೆ.
ಭಾನುವಾರ ಬೆಳಿಗ್ಗೆ ಇಲ್ಲಿನ ಹುಲಿಯಮ್ಮ ದೇವಸ್ಥಾನ ಬಳಿ ಸಭೆ ನಡೆದಿದ್ದು, ಸಭೆಯಲ್ಲಿ ನೂರಾರು ಹಿಂದು ಮುಖಂಡರು ಹಾಗೂ ಮಹಿಳೆಯರು ಭಾಗಿಯಾಗಿದ್ದರು.
ಜಿಲ್ಲಾಧಿಕಾರಿಗಳು ಗ್ರಾಮಸ್ಥರುಗಳ ಅಭಿಪ್ರಾಯದ ವಿರುದ್ಧವಾಗಿ ಆದೇಶ ನೀಡಿದ್ದಾರೆ, ಇದು ಸರಿಯಲ್ಲ. ಸದರಿ ಜಾಗ ವಸತಿ ವಲಯ, ಯಾವ ಭೂ ಪರಿವರ್ತನೆಯಾಗಿಲ್ಲ. ಇದನ್ನು ಪರಿಗಣಿಸದೆ ಶಾಲೆಗೆ ಅನುಮತಿ ನೀಡಿದ್ದಾರೆ. ವಿವಾದಿತ ಸ್ಥಳದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುವುದನ್ನು ತಪ್ಪಿಸುವಂತೆ ಗ್ರಾಮಸ್ಥರು ಸಭೆಯಲ್ಲಿ ಆಗ್ರಹಿಸಿದ್ದಾರೆ.
ಡಿಸಿ ಆದೇಶದ ವಿರುದ್ಧ ಕಾನೂನು ರೀತಿ ಹೋರಾಟಕ್ಕೆ ಮುಂದಾಗಲಿದ್ದೇವೆ. ಈ ಬಗ್ಗೆ ಪುನರ್ಪರಿಶೀಲನೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಮಸೀದಿ ತೆರವಿಗೆ ಅನುಮತಿ ಬೇಡ ; ಚಂದ್ರಮ್ಮ
ವಿವಾದಿತ ಸ್ಥಳದಲ್ಲಿ ಮಸೀದಿ ತೆರೆಯಲಿಕ್ಕೆ ಅನುಮತಿ ನೀಡಬಾರದು. ಆ ಮಸೀದಯಿಂದಲೇ ನನ್ನ ಮಗನ ಕೊಲೆ ಆಗಿದೆ. ಯಾವುದೇ ರೀತಿಯ ಚಟುವಟಿಕೆಗೆ ಅನುಮತಿ ಕೊಡಬಾರದು. ಒಂದು ವೇಳೆ ಅನುಮತಿ ಕೊಟ್ಟರೆ ಅದೇ ಸ್ಥಳದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ನಮ್ಮ ಮೊಮ್ಮಕ್ಕಳು ನಾವು ಎಲ್ಲರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಕ್ಯಾತಮಾರನಹಳ್ಳಿ ರಾಜು ತಾಯಿ ಚಂದ್ರಮ್ಮ ಹೇಳಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…