ಮೈಸೂರು

ವಿವಾದಿತ ಸ್ಥಳ | ಕ್ಯಾತಮಾರನಹಳ್ಳಿ ಗ್ರಾಮಸ್ಥರಿಂದ ಸಭೆ

ಮೈಸೂರು: ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದಲ್ಲಿ ಅರೇಬಿಕ್ ಶಾಲೆ ತೆರೆಯಲು ಮೈಸೂರು ಜಿಲ್ಲಾಧಿಕಾರ ಅನುಮತಿ ನೀಡಿದ ಹಿನ್ನೆಲೆ ಇಲ್ಲಿನ ಮುಖಂಡರು ಹಾಗೂ ಗ್ರಾಮಸ್ಥರು ಸಭೆ ನಡೆಸಿದ್ದಾರೆ.

ಭಾನುವಾರ ಬೆಳಿಗ್ಗೆ ಇಲ್ಲಿನ ಹುಲಿಯಮ್ಮ ದೇವಸ್ಥಾನ ಬಳಿ ಸಭೆ ನಡೆದಿದ್ದು, ಸಭೆಯಲ್ಲಿ ನೂರಾರು ಹಿಂದು ಮುಖಂಡರು ಹಾಗೂ ಮಹಿಳೆಯರು ಭಾಗಿಯಾಗಿದ್ದರು.

ಜಿಲ್ಲಾಧಿಕಾರಿಗಳು ಗ್ರಾಮಸ್ಥರುಗಳ ಅಭಿಪ್ರಾಯದ ವಿರುದ್ಧವಾಗಿ ಆದೇಶ ನೀಡಿದ್ದಾರೆ, ಇದು ಸರಿಯಲ್ಲ. ಸದರಿ ಜಾಗ ವಸತಿ ವಲಯ, ಯಾವ ಭೂ ಪರಿವರ್ತನೆಯಾಗಿಲ್ಲ. ಇದನ್ನು ಪರಿಗಣಿಸದೆ ಶಾಲೆಗೆ ಅನುಮತಿ ನೀಡಿದ್ದಾರೆ. ವಿವಾದಿತ ಸ್ಥಳದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುವುದನ್ನು ತಪ್ಪಿಸುವಂತೆ ಗ್ರಾಮಸ್ಥರು ಸಭೆಯಲ್ಲಿ ಆಗ್ರಹಿಸಿದ್ದಾರೆ.

ಡಿಸಿ ಆದೇಶದ ವಿರುದ್ಧ ಕಾನೂನು ರೀತಿ ಹೋರಾಟಕ್ಕೆ ಮುಂದಾಗಲಿದ್ದೇವೆ. ಈ ಬಗ್ಗೆ ಪುನರ್‌ಪರಿಶೀಲನೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

ಮಸೀದಿ ತೆರವಿಗೆ ಅನುಮತಿ ಬೇಡ ; ಚಂದ್ರಮ್ಮ

ವಿವಾದಿತ ಸ್ಥಳದಲ್ಲಿ ಮಸೀದಿ ತೆರೆಯಲಿಕ್ಕೆ ಅನುಮತಿ ನೀಡಬಾರದು. ಆ ಮಸೀದಯಿಂದಲೇ ನನ್ನ ಮಗನ ಕೊಲೆ ಆಗಿದೆ. ಯಾವುದೇ ರೀತಿಯ ಚಟುವಟಿಕೆಗೆ ಅನುಮತಿ ಕೊಡಬಾರದು. ಒಂದು ವೇಳೆ ಅನುಮತಿ ಕೊಟ್ಟರೆ ಅದೇ ಸ್ಥಳದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ನಮ್ಮ ಮೊಮ್ಮಕ್ಕಳು ನಾವು ಎಲ್ಲರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಕ್ಯಾತಮಾರನಹಳ್ಳಿ ರಾಜು ತಾಯಿ ಚಂದ್ರಮ್ಮ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

4 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

5 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

6 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

6 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

7 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

7 hours ago