ಮೈಸೂರು: ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದಲ್ಲಿ ಅರೇಬಿಕ್ ಶಾಲೆ ತೆರೆಯಲು ಮೈಸೂರು ಜಿಲ್ಲಾಧಿಕಾರ ಅನುಮತಿ ನೀಡಿದ ಹಿನ್ನೆಲೆ ಇಲ್ಲಿನ ಮುಖಂಡರು ಹಾಗೂ ಗ್ರಾಮಸ್ಥರು ಸಭೆ ನಡೆಸಿದ್ದಾರೆ.
ಭಾನುವಾರ ಬೆಳಿಗ್ಗೆ ಇಲ್ಲಿನ ಹುಲಿಯಮ್ಮ ದೇವಸ್ಥಾನ ಬಳಿ ಸಭೆ ನಡೆದಿದ್ದು, ಸಭೆಯಲ್ಲಿ ನೂರಾರು ಹಿಂದು ಮುಖಂಡರು ಹಾಗೂ ಮಹಿಳೆಯರು ಭಾಗಿಯಾಗಿದ್ದರು.
ಜಿಲ್ಲಾಧಿಕಾರಿಗಳು ಗ್ರಾಮಸ್ಥರುಗಳ ಅಭಿಪ್ರಾಯದ ವಿರುದ್ಧವಾಗಿ ಆದೇಶ ನೀಡಿದ್ದಾರೆ, ಇದು ಸರಿಯಲ್ಲ. ಸದರಿ ಜಾಗ ವಸತಿ ವಲಯ, ಯಾವ ಭೂ ಪರಿವರ್ತನೆಯಾಗಿಲ್ಲ. ಇದನ್ನು ಪರಿಗಣಿಸದೆ ಶಾಲೆಗೆ ಅನುಮತಿ ನೀಡಿದ್ದಾರೆ. ವಿವಾದಿತ ಸ್ಥಳದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುವುದನ್ನು ತಪ್ಪಿಸುವಂತೆ ಗ್ರಾಮಸ್ಥರು ಸಭೆಯಲ್ಲಿ ಆಗ್ರಹಿಸಿದ್ದಾರೆ.
ಡಿಸಿ ಆದೇಶದ ವಿರುದ್ಧ ಕಾನೂನು ರೀತಿ ಹೋರಾಟಕ್ಕೆ ಮುಂದಾಗಲಿದ್ದೇವೆ. ಈ ಬಗ್ಗೆ ಪುನರ್ಪರಿಶೀಲನೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಮಸೀದಿ ತೆರವಿಗೆ ಅನುಮತಿ ಬೇಡ ; ಚಂದ್ರಮ್ಮ
ವಿವಾದಿತ ಸ್ಥಳದಲ್ಲಿ ಮಸೀದಿ ತೆರೆಯಲಿಕ್ಕೆ ಅನುಮತಿ ನೀಡಬಾರದು. ಆ ಮಸೀದಯಿಂದಲೇ ನನ್ನ ಮಗನ ಕೊಲೆ ಆಗಿದೆ. ಯಾವುದೇ ರೀತಿಯ ಚಟುವಟಿಕೆಗೆ ಅನುಮತಿ ಕೊಡಬಾರದು. ಒಂದು ವೇಳೆ ಅನುಮತಿ ಕೊಟ್ಟರೆ ಅದೇ ಸ್ಥಳದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ನಮ್ಮ ಮೊಮ್ಮಕ್ಕಳು ನಾವು ಎಲ್ಲರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಕ್ಯಾತಮಾರನಹಳ್ಳಿ ರಾಜು ತಾಯಿ ಚಂದ್ರಮ್ಮ ಹೇಳಿದ್ದಾರೆ.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…