ಮೈಸೂರು: ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದಲ್ಲಿ ಅರೇಬಿಕ್ ಶಾಲೆ ತೆರೆಯಲು ಮೈಸೂರು ಜಿಲ್ಲಾಧಿಕಾರ ಅನುಮತಿ ನೀಡಿದ ಹಿನ್ನೆಲೆ ಇಲ್ಲಿನ ಮುಖಂಡರು ಹಾಗೂ ಗ್ರಾಮಸ್ಥರು ಸಭೆ ನಡೆಸಿದ್ದಾರೆ.
ಭಾನುವಾರ ಬೆಳಿಗ್ಗೆ ಇಲ್ಲಿನ ಹುಲಿಯಮ್ಮ ದೇವಸ್ಥಾನ ಬಳಿ ಸಭೆ ನಡೆದಿದ್ದು, ಸಭೆಯಲ್ಲಿ ನೂರಾರು ಹಿಂದು ಮುಖಂಡರು ಹಾಗೂ ಮಹಿಳೆಯರು ಭಾಗಿಯಾಗಿದ್ದರು.
ಜಿಲ್ಲಾಧಿಕಾರಿಗಳು ಗ್ರಾಮಸ್ಥರುಗಳ ಅಭಿಪ್ರಾಯದ ವಿರುದ್ಧವಾಗಿ ಆದೇಶ ನೀಡಿದ್ದಾರೆ, ಇದು ಸರಿಯಲ್ಲ. ಸದರಿ ಜಾಗ ವಸತಿ ವಲಯ, ಯಾವ ಭೂ ಪರಿವರ್ತನೆಯಾಗಿಲ್ಲ. ಇದನ್ನು ಪರಿಗಣಿಸದೆ ಶಾಲೆಗೆ ಅನುಮತಿ ನೀಡಿದ್ದಾರೆ. ವಿವಾದಿತ ಸ್ಥಳದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುವುದನ್ನು ತಪ್ಪಿಸುವಂತೆ ಗ್ರಾಮಸ್ಥರು ಸಭೆಯಲ್ಲಿ ಆಗ್ರಹಿಸಿದ್ದಾರೆ.
ಡಿಸಿ ಆದೇಶದ ವಿರುದ್ಧ ಕಾನೂನು ರೀತಿ ಹೋರಾಟಕ್ಕೆ ಮುಂದಾಗಲಿದ್ದೇವೆ. ಈ ಬಗ್ಗೆ ಪುನರ್ಪರಿಶೀಲನೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಮಸೀದಿ ತೆರವಿಗೆ ಅನುಮತಿ ಬೇಡ ; ಚಂದ್ರಮ್ಮ
ವಿವಾದಿತ ಸ್ಥಳದಲ್ಲಿ ಮಸೀದಿ ತೆರೆಯಲಿಕ್ಕೆ ಅನುಮತಿ ನೀಡಬಾರದು. ಆ ಮಸೀದಯಿಂದಲೇ ನನ್ನ ಮಗನ ಕೊಲೆ ಆಗಿದೆ. ಯಾವುದೇ ರೀತಿಯ ಚಟುವಟಿಕೆಗೆ ಅನುಮತಿ ಕೊಡಬಾರದು. ಒಂದು ವೇಳೆ ಅನುಮತಿ ಕೊಟ್ಟರೆ ಅದೇ ಸ್ಥಳದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ನಮ್ಮ ಮೊಮ್ಮಕ್ಕಳು ನಾವು ಎಲ್ಲರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಕ್ಯಾತಮಾರನಹಳ್ಳಿ ರಾಜು ತಾಯಿ ಚಂದ್ರಮ್ಮ ಹೇಳಿದ್ದಾರೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…