ಮೈಸೂರು: ಕೆಬಿಎಲ್ ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಶಾಲೆ ಹಾಗೂ ಎಂಎಎಸ್ಪಿ ಅಕ್ವಾಟಿಕ್ಸ್ ಕ್ಲಬ್ನ ಸಹಯೋಗದಲ್ಲಿ ಶಾಲೆಯ ಆವರಣದಲ್ಲಿ ನಿರ್ಮಿಸಲಾಗಿರುವ ಈಜುಕೊಳವನ್ನು ಶಾಸಕ ಟಿ.ಎಸ್.ಶ್ರೀವತ್ಸ ಉದ್ಘಾಟಿಸಿದರು.
ನಗರದ ಲಲಿತಾದ್ರಿಪುರದ ಕೆಬಿಎಲ್ ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನೂತನವಾಗಿ ನಿಮಿ ಸಿರುವ ನಗರದ ಮೊದಲ ವಾರ್ಮ್ ಈಜುಕೊಳವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಶಾಸಕರು, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವವರಿಗೆ ಈಜು ಕಲಿಕೆ ಸಹಕಾರಿಯಾಗಲಿದೆ. ಲಲಿತಾದ್ರಿಪುರ ಭಾಗಕ್ಕೆ ಯಾವುದೇ ಈಜುಕೊಳವಿರಲಿಲ್ಲ. ಈ ಭಾಗದ ಈಜು ಪ್ರಿಯರು ನಗರ ಕೇಂದ್ರದಲ್ಲಿರುವ ಈಜುಕೊಳಗಳಿಗೆ ಆಗಮಿಸುತ್ತಿದ್ದರು. ಇದೀಗ ಹೊಸ ಈಜುಕೊಳ ನಿರ್ಮಾಣದಿಂದ ಆ ಕೊರತೆ ದೂರವಾಗಲಿದೆ. ಎಲ್ಲರೂ ಈ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಈ.ಸಿ.ನಿಂಗರಾಜ್ ಗೌಡ ಮಾತನಾಡಿ, ಈಜು ಜೀವ ರಕ್ಷಣೆಯ ಕಲೆಯಾಗಿದೆ. ಇದನ್ನು ಪ್ರತಿಯೊಬ್ಬರು ಕಲಿಯಬೇಕು ಎಂದು ಸಲಹೆ ನೀಡಿದರು.
ಮೈಸೂರು ವಿವಿ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಡಿ.ಎಸ್.ಗುರು ಮಾತನಾಡಿ, ಈಜು ದೇಹದ ಎಲ್ಲಾ ಅಂಗಾಂಗಗಳಿಗೂ ವ್ಯಾಯಾಮವನ್ನು ನೀಡುವ ಕ್ರೀಡೆಯಾಗಿದೆ. ಮಕ್ಕಳು ಬಹುಮುಖ ಪ್ರತಿಭೆಗಳಾಗಿ ಹಾಗೂ ಆರೋಗ್ಯವಂತರಾಗಿ ಬೆಳೆಯಲು ಈಜು ಅನುಕೂಲವಾಗುತ್ತದೆ ಎಂದರು.
ಚಲನಚಿತ್ರ ನಟ ಶಂಕರ್ ಅಶ್ವಥ್ ಮಾತನಾಡಿದರು. ವೈ.ಎಸ್.ಪ್ರಾಪರ್ಟಿಸ್ನ ಕೆ.ಎನ್.ಸಂತೋಷ್, ಕೆ.ಎಚ್.ಕಿರಣ್, ಸೇಫ್ ವ್ಹೀಲ್ ಟ್ರಾವೆಲ್ಸ್ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಪ್ರಶಾಂತ್, ಕೆಬಿಎಲ್ ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಶಾಲೆಯ ಪ್ರಾಂಶುಪಾಲರಾದ ಡಾ.ದೀಪ್ತಿ ಚತುರ್ವೇದಿ ಮತ್ತಿತರರು ಹಾಜರಿದ್ದರು.
ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ನವದೆಹಲಿ: ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ…
ಟೆಹರಾನ್: ಅಮೇರಿಕಾ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ನ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆಯಾಗಿದ್ದಾರೆ…
ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ…
ದೇವನಹಳ್ಳಿ: ಸಮಸಮಾಜದ ನಿರ್ಮಾಣಕ್ಕೆ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು, ಬಸವ ತತ್ವಗಳ ಪ್ರಚಾರ, ಪ್ರಸಾರ ಇಂದಿನ ಅಗತ್ಯವಾಗಿದೆ ಎಂದು…
ಮದ್ದೂರು: ತಾಲ್ಲೂಕಿನ ಭಾರತೀನಗರ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಬಾಣಸಮುದ್ರ…