ಮೈಸೂರು

ಮೈಸೂರು: ಗೃಹ ಪ್ರವೇಶದಲ್ಲಿ ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ: ಓರ್ವ ವೃದ್ಧೆ ಸಾವು

ಮೈಸೂರು: ತಾಲೂಕಿನ ಮಾರ್ಬಳ್ಳಿ ಗ್ರಾಮದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ ಜನರಲ್ಲಿ ವಾಂತಿ ಭೇದಿ ಉಂಟಾಗಿದ್ದು, ಓರ್ವ ವೃದ್ಧೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಶಿವಮ್ಮ(65) ಎಂಬ ವೃದ್ಧೆ ಸಾವನ್ನಪ್ಪಿದ್ದವರು.

ಘಟನೆಯ ವಿವಿರ
ಮೇ.31 ರಂದು ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮ ಇತ್ತು. ಈ ಕಾರ್ಯಕ್ರಮದಲ್ಲಿ ಗ್ರಾಮದ ಸುಮಾರು 300ಕ್ಕೂ ಹೆಚ್ಚು ಜನರು ಊಟ ಸೇವಿಸಿದ್ದರು. ಆ ಪೈಕಿ 50ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಉಂಟಾಗಿದ್ದು, ಇವರನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಗ್ರಾಮದಲ್ಲಿ ಗ್ರಾಮ ಆರೋಗ್ಯಧಿಕಾರಿ ಮೊಕ್ಕಂ ಹೂಡಿದ್ದು, ಆರೋಗ್ಯ ದೃಷ್ಠಿಯಿಂದ ಊಟ ಸೇವಿಸಿದ್ದ ಎಲ್ಲರ ಆರೋಗ್ಯವನ್ನು ಪರೀಕ್ಷಿಸುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

36 mins ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

48 mins ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

1 hour ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

2 hours ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

2 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

3 hours ago