ಮೈಸೂರು

ಮೈಸೂರು | ದಿಢೀರ್‌ ಮಳೆಗೆ ವಾಹನ ಸವಾರರು ಹೈರಾಣು

ಮೈಸೂರು : ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಕೆಲ ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೂಡ ನಗರದ ಹಲವೆಡೆ ಮಳೆಯಾಗಿದೆ.

ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿ, ಮೈಸೂರಿಗೆ ಯೆಲ್ಲೋ ಅಲರ್ಟ್‌ ಕೂಡ ಘೋಷಿಸಿತ್ತು. ಮಧ್ಯಾಹ್ನ ಬಿರು ಬಿಸಿಲಿದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಮಳೆ ಸುರಿಯಿತು.

ಎಲ್ಲೆಲ್ಲಿ ಮಳೆ?
ಬೋಗಾದಿ, ಸರಸ್ವತಿ ಪುರಂ, ಗಂಗೋತ್ರಿ, ಕುವೆಂಪುನಗರ, ಅಶೋಕಪುರಂ, ಅಗ್ರಹಾರ, ಕೆ.ಆರ್‌ ವೃತ್ತ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್‌ ರಸ್ತೆ, ಉದಯಗಿರಿ ಸೇರಿದಂತೆ ಹಲವೆಡೆ ಮಳೆ ಸುರಿಯಿತು.

ಈ ವೇಳೆ ವಾಹನ ಸವಾರರಿಗೆ ಅಡಚಣೆಯಾಯಿತು. ಇನ್ನಷ್ಟು ಜನರು ಅಲ್ಲಲ್ಲಿ ನಿಂತು ಆಶ್ರಯ ಪಡೆದರೆ, ಹೊರಗಿನವರು ಬಸ್‌ ನಿಲ್ದಾಣಕ್ಕೆ ಮಳೆಯಲ್ಲೇ ನೆನೆದು ಬಸ್‌ಗಳನ್ನು ಹತ್ತಿ ಹೊರಟರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

1 hour ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

1 hour ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

1 hour ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

1 hour ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

1 hour ago