ಮೈಸೂರು

ಮುಡಾದಲ್ಲಿ ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆಗೆ ಒತ್ತಾಯಿಸಿದ ಎಚ್.ವಿಶ್ವನಾಥ್‌

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಸೇರಿದಂತೆ ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಭೈರತಿ ಸುರೇಶ್‌ ಸ್ವತಃ ರಿಯಲ್‌ ಎಸ್ಟೇಟ್‌ ಗಿರಾಕಿ. ಸಿದ್ದು ಶಿಷ್ಯನಿಂದ ಮುಡಾ ಹಾಳಾಗಿದೆ. ಆತ ಹೇಳಿದ್ದಕ್ಕೆಲ್ಲಾ ಸಿದ್ದರಾಮಯ್ಯ ಸೈ ಎನ್ನುತ್ತಿರುವುದು ನಾಚಿಕೆಗೇಡು. ಇವರೆಲ್ಲಾ ಸೇರಿಕೊಂಡು ಅಧಿಕಾರಿಗಳ ಜೊತೆ ಸಿಂಡಿಕೇಟ್‌ ರಚಿಸಿಕೊಂಡಿದ್ದು ಅದಕ್ಕೆ ಡಾ.ಯತೀಂದ್ರ ನಾಯಕ. ಆತ ಬುದ್ದಿವಂತನೋ, ಮಂಗನೋ ಗೊತ್ತಿಲ್ಲ. ಅವರನ್ನು ಮುಂದಿಟ್ಟುಕೊಂಡೇ ಈ ದಂಧೆ ನಡೆಸಲಾಗುತ್ತಿದೆ ಎಂದು ದೂರಿದರು.

ವಿಧಾನಪರಿಷತ್‌ ಸದಸ್ಯ ಸಿ.ಎನ್.ಮಂಜೇಗೌಡ ಅಟೆಂಡರ್‌ ರೀತಿ ಕಡತಗಳನ್ನು ಇಟ್ಟುಕೊಂಡು ಮುಡಾ ಕಚೇರಿಯಲ್ಲಿ ಓಡಾಡುತ್ತಿದ್ದಾರೆ. ಎಂಎಲ್‌ಸಿ ಡಾ.ಯತೀಂದ್ರ, ಶಾಸಕ ಹರೀಶ್‌ ಗೌಡ, ರಾಕೇಶ್‌ ಪಾಪಣ್ಣ, ಮುಡಾದ ಹಾಲಿ ಅಧ್ಯಕ್ಷ ಮರಿಗೌಡ, ಹಿಂದಿನ ಅಧ್ಯಕ್ಷ ಎಚ್.ವಿ.ರಾಜೀವ್‌, ಹಿಂದಿನ ಆಯುಕ್ತ ನಟೇಶ್‌, ಈಗಿನ ಆಯುಕ್ತ ದಿನೇಶ್‌ ಹಾಗೂ ಅವರ ಮೈದುನ ತೇಜಸ್‌ ಗೌಡ, ಮರಿತಿಬ್ಬೇಗೌಡರ ಶಿಷ್ಯ ಸುದೀಪ್‌, ದಲ್ಲಾಳಿಗಳಾದ ಉತ್ತಮ್‌ ಗೌಡ, ಮೋಹನ್‌ ಸೇರಿದಂತೆ ಹಲವರು ಈ ಭ್ರಷ್ಟಾಚಾರದಲ್ಲಿ ಭಾಗಿ ಆಗಿದ್ದಾರೆ. ಹೊರಗುತ್ತಿಗೆ ನೌಕರರನ್ನು ಇಟ್ಟುಕೊಂಡು ದಾಖಲೆಗಳನ್ನು ತಿದ್ದಲಾಗುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಚಿವ ಭೈರತಿ ಸುರೇಶ್‌ ಮುಡಾದ ದಾಖಲೆಗಳನ್ನು ಒಂದು ಟ್ರಕ್‌ನಲ್ಲಿ ಬೆಂಗಳೂರಿಗೆ ತರಿಸಿಕೊಂಡಿದ್ದಾರೆ. ಅದರಲ್ಲಿ ಅದೇನು ತಿದ್ದುತ್ತಾರೋ ಎಂದು ಆತಂಕ ವ್ಯಕ್ತಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

15 mins ago

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…

20 mins ago

ನಾಳೆ ಭಾರತ ಬಂದ್‌ : ಶಾಲಾ, ಕಾಲೇಜು ಬಂದ್? ಏನಿರುತ್ತೇ, ಏನಿರಲ್ಲ?

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ.…

37 mins ago

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ ; ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…

1 hour ago

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

1 hour ago

ಸೈಬರ್‌ ವಂಚನೆ ಕೇವಲ ಆರ್ಥಿಕ ಅಪರಾಧವಲ್ಲ. ರಾಷ್ಟ್ರೀಯ ಭದ್ರತೆಗೆ ಸವಾಲು: ಅಮಿತ್‌ ಶಾ

ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್‌ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್‌ ಭದ್ರತೆಯು ಈಗ ಕೇವಲ…

2 hours ago