ಮೈಸೂರು

ಮುಡಾದಲ್ಲಿ ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆಗೆ ಒತ್ತಾಯಿಸಿದ ಎಚ್.ವಿಶ್ವನಾಥ್‌

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಸೇರಿದಂತೆ ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಭೈರತಿ ಸುರೇಶ್‌ ಸ್ವತಃ ರಿಯಲ್‌ ಎಸ್ಟೇಟ್‌ ಗಿರಾಕಿ. ಸಿದ್ದು ಶಿಷ್ಯನಿಂದ ಮುಡಾ ಹಾಳಾಗಿದೆ. ಆತ ಹೇಳಿದ್ದಕ್ಕೆಲ್ಲಾ ಸಿದ್ದರಾಮಯ್ಯ ಸೈ ಎನ್ನುತ್ತಿರುವುದು ನಾಚಿಕೆಗೇಡು. ಇವರೆಲ್ಲಾ ಸೇರಿಕೊಂಡು ಅಧಿಕಾರಿಗಳ ಜೊತೆ ಸಿಂಡಿಕೇಟ್‌ ರಚಿಸಿಕೊಂಡಿದ್ದು ಅದಕ್ಕೆ ಡಾ.ಯತೀಂದ್ರ ನಾಯಕ. ಆತ ಬುದ್ದಿವಂತನೋ, ಮಂಗನೋ ಗೊತ್ತಿಲ್ಲ. ಅವರನ್ನು ಮುಂದಿಟ್ಟುಕೊಂಡೇ ಈ ದಂಧೆ ನಡೆಸಲಾಗುತ್ತಿದೆ ಎಂದು ದೂರಿದರು.

ವಿಧಾನಪರಿಷತ್‌ ಸದಸ್ಯ ಸಿ.ಎನ್.ಮಂಜೇಗೌಡ ಅಟೆಂಡರ್‌ ರೀತಿ ಕಡತಗಳನ್ನು ಇಟ್ಟುಕೊಂಡು ಮುಡಾ ಕಚೇರಿಯಲ್ಲಿ ಓಡಾಡುತ್ತಿದ್ದಾರೆ. ಎಂಎಲ್‌ಸಿ ಡಾ.ಯತೀಂದ್ರ, ಶಾಸಕ ಹರೀಶ್‌ ಗೌಡ, ರಾಕೇಶ್‌ ಪಾಪಣ್ಣ, ಮುಡಾದ ಹಾಲಿ ಅಧ್ಯಕ್ಷ ಮರಿಗೌಡ, ಹಿಂದಿನ ಅಧ್ಯಕ್ಷ ಎಚ್.ವಿ.ರಾಜೀವ್‌, ಹಿಂದಿನ ಆಯುಕ್ತ ನಟೇಶ್‌, ಈಗಿನ ಆಯುಕ್ತ ದಿನೇಶ್‌ ಹಾಗೂ ಅವರ ಮೈದುನ ತೇಜಸ್‌ ಗೌಡ, ಮರಿತಿಬ್ಬೇಗೌಡರ ಶಿಷ್ಯ ಸುದೀಪ್‌, ದಲ್ಲಾಳಿಗಳಾದ ಉತ್ತಮ್‌ ಗೌಡ, ಮೋಹನ್‌ ಸೇರಿದಂತೆ ಹಲವರು ಈ ಭ್ರಷ್ಟಾಚಾರದಲ್ಲಿ ಭಾಗಿ ಆಗಿದ್ದಾರೆ. ಹೊರಗುತ್ತಿಗೆ ನೌಕರರನ್ನು ಇಟ್ಟುಕೊಂಡು ದಾಖಲೆಗಳನ್ನು ತಿದ್ದಲಾಗುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಚಿವ ಭೈರತಿ ಸುರೇಶ್‌ ಮುಡಾದ ದಾಖಲೆಗಳನ್ನು ಒಂದು ಟ್ರಕ್‌ನಲ್ಲಿ ಬೆಂಗಳೂರಿಗೆ ತರಿಸಿಕೊಂಡಿದ್ದಾರೆ. ಅದರಲ್ಲಿ ಅದೇನು ತಿದ್ದುತ್ತಾರೋ ಎಂದು ಆತಂಕ ವ್ಯಕ್ತಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

4 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

4 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

4 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

5 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

8 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

9 hours ago