ಮೈಸೂರು

ಮುಡಾದಲ್ಲಿ ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆಗೆ ಒತ್ತಾಯಿಸಿದ ಎಚ್.ವಿಶ್ವನಾಥ್‌

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಸೇರಿದಂತೆ ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಭೈರತಿ ಸುರೇಶ್‌ ಸ್ವತಃ ರಿಯಲ್‌ ಎಸ್ಟೇಟ್‌ ಗಿರಾಕಿ. ಸಿದ್ದು ಶಿಷ್ಯನಿಂದ ಮುಡಾ ಹಾಳಾಗಿದೆ. ಆತ ಹೇಳಿದ್ದಕ್ಕೆಲ್ಲಾ ಸಿದ್ದರಾಮಯ್ಯ ಸೈ ಎನ್ನುತ್ತಿರುವುದು ನಾಚಿಕೆಗೇಡು. ಇವರೆಲ್ಲಾ ಸೇರಿಕೊಂಡು ಅಧಿಕಾರಿಗಳ ಜೊತೆ ಸಿಂಡಿಕೇಟ್‌ ರಚಿಸಿಕೊಂಡಿದ್ದು ಅದಕ್ಕೆ ಡಾ.ಯತೀಂದ್ರ ನಾಯಕ. ಆತ ಬುದ್ದಿವಂತನೋ, ಮಂಗನೋ ಗೊತ್ತಿಲ್ಲ. ಅವರನ್ನು ಮುಂದಿಟ್ಟುಕೊಂಡೇ ಈ ದಂಧೆ ನಡೆಸಲಾಗುತ್ತಿದೆ ಎಂದು ದೂರಿದರು.

ವಿಧಾನಪರಿಷತ್‌ ಸದಸ್ಯ ಸಿ.ಎನ್.ಮಂಜೇಗೌಡ ಅಟೆಂಡರ್‌ ರೀತಿ ಕಡತಗಳನ್ನು ಇಟ್ಟುಕೊಂಡು ಮುಡಾ ಕಚೇರಿಯಲ್ಲಿ ಓಡಾಡುತ್ತಿದ್ದಾರೆ. ಎಂಎಲ್‌ಸಿ ಡಾ.ಯತೀಂದ್ರ, ಶಾಸಕ ಹರೀಶ್‌ ಗೌಡ, ರಾಕೇಶ್‌ ಪಾಪಣ್ಣ, ಮುಡಾದ ಹಾಲಿ ಅಧ್ಯಕ್ಷ ಮರಿಗೌಡ, ಹಿಂದಿನ ಅಧ್ಯಕ್ಷ ಎಚ್.ವಿ.ರಾಜೀವ್‌, ಹಿಂದಿನ ಆಯುಕ್ತ ನಟೇಶ್‌, ಈಗಿನ ಆಯುಕ್ತ ದಿನೇಶ್‌ ಹಾಗೂ ಅವರ ಮೈದುನ ತೇಜಸ್‌ ಗೌಡ, ಮರಿತಿಬ್ಬೇಗೌಡರ ಶಿಷ್ಯ ಸುದೀಪ್‌, ದಲ್ಲಾಳಿಗಳಾದ ಉತ್ತಮ್‌ ಗೌಡ, ಮೋಹನ್‌ ಸೇರಿದಂತೆ ಹಲವರು ಈ ಭ್ರಷ್ಟಾಚಾರದಲ್ಲಿ ಭಾಗಿ ಆಗಿದ್ದಾರೆ. ಹೊರಗುತ್ತಿಗೆ ನೌಕರರನ್ನು ಇಟ್ಟುಕೊಂಡು ದಾಖಲೆಗಳನ್ನು ತಿದ್ದಲಾಗುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಚಿವ ಭೈರತಿ ಸುರೇಶ್‌ ಮುಡಾದ ದಾಖಲೆಗಳನ್ನು ಒಂದು ಟ್ರಕ್‌ನಲ್ಲಿ ಬೆಂಗಳೂರಿಗೆ ತರಿಸಿಕೊಂಡಿದ್ದಾರೆ. ಅದರಲ್ಲಿ ಅದೇನು ತಿದ್ದುತ್ತಾರೋ ಎಂದು ಆತಂಕ ವ್ಯಕ್ತಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

2 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

2 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

2 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

2 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

2 hours ago