ಮೈಸೂರು: ಆರ್ಥಿಕವಾಗಿ ದುರ್ಬಲವಾದ ಬಡವರಿಗೆ ಮನೆ ಹಂಚಲು ಒತ್ತಾಯಿಸಿ ಹಾಗೂ ಮೈಸೂರು ಮುಡಾದಲ್ಲಿ ನಡೆದಿರುವ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಮೈಸೂರು ಮುಡಾ ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಆರ್ಥಿಕವಾಗಿ ಹಿಂದುಳಿದವರಿಗೆ, ಬಡವರಿಗೆ ಹಾಗೂ ಸೂರಿಲ್ಲದವರಿಗೆ ರಿಯಾಯಿತಿ ದರದಲ್ಲಿ ನೀಡಬೇಕಾದ ನಿವೇಶನವನ್ನು, ಮುಡಾವು ರಿಯಲ್ ಎಸ್ಟೇಟ್ ಕೋರರಿಗೆ, ದಲ್ಲಾಳಿಗಳಿಗೆ ನೀಡಿರುವುದು ಒಳ್ಳೆಯ ಬೆಳವಣಿಗೆಯಲ್ಲ.
ಮೈಸೂರಿನಲ್ಲಿ ಲಕ್ಷಾಂತರ ಜನರು ಸ್ವಂತ ಮನೆ ಇಲ್ಲದೇ ಬಾಡಿಗೆ ಮನೆಯಲ್ಲೇ ವಾಸ ಮಾಡುತ್ತಿದ್ದಾರೆ. ಕೆಲವು ಜನ ಉಸಿರುಗಟ್ಟುವ ಸಣ್ಣ ಸಣ್ಣ ಮನೆಯಲ್ಲೇ ವಾಸವಿದ್ದಾರೆ. ಹೀಗಿರುವಾಗ ಮೂಡಾವು ಬಲಾಢ್ಯರಿಗೆ, ರಿಯಲ್ ಎಸ್ಟೇಟ್ ದಲ್ಲಾಳಿಗಳಿಗೆ ಅನುಕೂಲ ಮಾಡಿಕೊಟ್ಟಿದೆ. ಮುಡಾದಲ್ಲಿ ಈಗ ಹಾಗೂ ಈ ಹಿಂದೆ ನಡೆದಿರುವ ಎಲ್ಲಾ ಹಗರಣಗಳ ಕುರಿತು ಸಮಗ್ರ ತನಿಖೆಯಾಗಬೇಕು. ಈ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಯಾಗಲೇಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…