ಮೈಸೂರು

ಮೈಸೂರು ಮುಡಾದಲ್ಲಿ ನಡೆದ ಅಕ್ರಮ ಖಂಡಿಸಿ ಭಾರತ ಕಮ್ಯುನಿಸ್ಟ್‌ ಪಕ್ಷದ ವತಿಯಿಂದ ಪ್ರತಿಭಟನೆ

ಮೈಸೂರು: ಆರ್ಥಿಕವಾಗಿ ದುರ್ಬಲವಾದ ಬಡವರಿಗೆ ಮನೆ ಹಂಚಲು ಒತ್ತಾಯಿಸಿ ಹಾಗೂ ಮೈಸೂರು ಮುಡಾದಲ್ಲಿ ನಡೆದಿರುವ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಮೈಸೂರು ಮುಡಾ ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಆರ್ಥಿಕವಾಗಿ ಹಿಂದುಳಿದವರಿಗೆ, ಬಡವರಿಗೆ ಹಾಗೂ ಸೂರಿಲ್ಲದವರಿಗೆ ರಿಯಾಯಿತಿ ದರದಲ್ಲಿ ನೀಡಬೇಕಾದ ನಿವೇಶನವನ್ನು, ಮುಡಾವು ರಿಯಲ್‌ ಎಸ್ಟೇಟ್‌ ಕೋರರಿಗೆ, ದಲ್ಲಾಳಿಗಳಿಗೆ ನೀಡಿರುವುದು ಒಳ್ಳೆಯ ಬೆಳವಣಿಗೆಯಲ್ಲ.

ಮೈಸೂರಿನಲ್ಲಿ ಲಕ್ಷಾಂತರ ಜನರು ಸ್ವಂತ ಮನೆ ಇಲ್ಲದೇ ಬಾಡಿಗೆ ಮನೆಯಲ್ಲೇ ವಾಸ ಮಾಡುತ್ತಿದ್ದಾರೆ. ಕೆಲವು ಜನ ಉಸಿರುಗಟ್ಟುವ ಸಣ್ಣ ಸಣ್ಣ ಮನೆಯಲ್ಲೇ ವಾಸವಿದ್ದಾರೆ. ಹೀಗಿರುವಾಗ ಮೂಡಾವು ಬಲಾಢ್ಯರಿಗೆ, ರಿಯಲ್‌ ಎಸ್ಟೇಟ್‌ ದಲ್ಲಾಳಿಗಳಿಗೆ ಅನುಕೂಲ ಮಾಡಿಕೊಟ್ಟಿದೆ. ಮುಡಾದಲ್ಲಿ ಈಗ ಹಾಗೂ ಈ ಹಿಂದೆ ನಡೆದಿರುವ ಎಲ್ಲಾ ಹಗರಣಗಳ ಕುರಿತು ಸಮಗ್ರ ತನಿಖೆಯಾಗಬೇಕು. ಈ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಯಾಗಲೇಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

1 hour ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

1 hour ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

2 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

4 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

5 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

6 hours ago