ಮೈಸೂರು: ಆರ್ಥಿಕವಾಗಿ ದುರ್ಬಲವಾದ ಬಡವರಿಗೆ ಮನೆ ಹಂಚಲು ಒತ್ತಾಯಿಸಿ ಹಾಗೂ ಮೈಸೂರು ಮುಡಾದಲ್ಲಿ ನಡೆದಿರುವ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಮೈಸೂರು ಮುಡಾ ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಆರ್ಥಿಕವಾಗಿ ಹಿಂದುಳಿದವರಿಗೆ, ಬಡವರಿಗೆ ಹಾಗೂ ಸೂರಿಲ್ಲದವರಿಗೆ ರಿಯಾಯಿತಿ ದರದಲ್ಲಿ ನೀಡಬೇಕಾದ ನಿವೇಶನವನ್ನು, ಮುಡಾವು ರಿಯಲ್ ಎಸ್ಟೇಟ್ ಕೋರರಿಗೆ, ದಲ್ಲಾಳಿಗಳಿಗೆ ನೀಡಿರುವುದು ಒಳ್ಳೆಯ ಬೆಳವಣಿಗೆಯಲ್ಲ.
ಮೈಸೂರಿನಲ್ಲಿ ಲಕ್ಷಾಂತರ ಜನರು ಸ್ವಂತ ಮನೆ ಇಲ್ಲದೇ ಬಾಡಿಗೆ ಮನೆಯಲ್ಲೇ ವಾಸ ಮಾಡುತ್ತಿದ್ದಾರೆ. ಕೆಲವು ಜನ ಉಸಿರುಗಟ್ಟುವ ಸಣ್ಣ ಸಣ್ಣ ಮನೆಯಲ್ಲೇ ವಾಸವಿದ್ದಾರೆ. ಹೀಗಿರುವಾಗ ಮೂಡಾವು ಬಲಾಢ್ಯರಿಗೆ, ರಿಯಲ್ ಎಸ್ಟೇಟ್ ದಲ್ಲಾಳಿಗಳಿಗೆ ಅನುಕೂಲ ಮಾಡಿಕೊಟ್ಟಿದೆ. ಮುಡಾದಲ್ಲಿ ಈಗ ಹಾಗೂ ಈ ಹಿಂದೆ ನಡೆದಿರುವ ಎಲ್ಲಾ ಹಗರಣಗಳ ಕುರಿತು ಸಮಗ್ರ ತನಿಖೆಯಾಗಬೇಕು. ಈ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಯಾಗಲೇಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…