ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಕೇವಲ ಸಿಎಂ ಸಿದ್ದರಾಮಯ್ಯ ಅವರ 14 ನಿವೇಶನಗಳ ಬಗ್ಗೆ ಅಷ್ಟೇ ತನಿಖೆ ನಡೆಸಿದ್ದು, ಇನ್ನುಳಿದ ಆರೋಪಿಗಳು ಈ ಹಗರಣದಿಂದ ಬಚಾವ್ ಆಗಿದ್ದಾರೆ. ಹಾಗಾಗಿ ಮತ್ತಷ್ಟು ದಾಖಲೆ ಸಹಿತ ದೂರು ನೀಡಿದ್ದೇನೆ ಎಂದು ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ಸಲ್ಲಿಸಿದ್ದಾರೆ.
ನಗರದ ಲೋಕಾಯುಕ್ತ ಪೊಲೀಸರಿಗೆ ಇಂದು(ಫೆಬ್ರವರಿ.14) ದೂರು ನೀಡಿದ ಬಳಿಕ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮುಡಾದ 50:50 ಅನುಪಾತದ ಬದಲಿ ನಿವೇಶನಗಳಿಗೆ ಸಂಬಂಧ ತನಿಖೆ ಮಾಡುವಂತೆ ಲೋಕಾಯುಕ್ತಕ್ಕೆ ಮನವಿ ಪತ್ರ ನೀಡಿದ್ದೆ. ಆದರೆ ಲೋಕಾಯುಕ್ತ ಅಧಿಕಾರಿಗಳು ಕೇವಲ ಸಿಎಂ ಸಿದ್ದರಾಮಯ್ಯ ಕುಟುಂಬದ 14 ನಿವೇಶನಗಳ ಬಗ್ಗೆ ಮಾತ್ರ ತನಿಖೆ ಮಾಡಿದ್ದಾರೆ. ಹೀಗಾಗಿ ಇನಿತರ ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.
ಇನ್ನು ದಟ್ಟಗಳ್ಳಿ ಗ್ರಾಮದಲ್ಲಿ ಸಿಎಂ ಪತ್ನಿ ಪಾರ್ವತಿ ಅವರು 24 ಲಕ್ಷ ರೂ. ನೀಡಿ ಒಂದು ಸೈಟು ಖರೀದಿ ಮಾಡಿ, ಅದನ್ನು 1 ಕೋಟಿ ರೂ.ಗಳಿಗೆ ಮಾರಾಟ ಮಾಡಿದ್ದಾರೆ. ಆ ಸೈಟ್ ಅನ್ನು ಸತ್ಯನಾರಾಯಣ ಎಂಬುವವರು ಖರೀದಿ ಮಾಡಿದ್ದಾರೆ. ಈ ನಿವೇಶನವನ್ನು 2008 ಖರೀದಿಸಿ 2014 ರಲ್ಲಿ ಮಾರಾಟ ಮಾಡಲಾಗಿದೆ. ಆ ಆರು ವರ್ಷಗಳಲ್ಲಿ ೭೫ ಲಕ್ಷ ರೂ. ಲಾಭ ಮಾಡಿಕೊಂಡಿದ್ದಾರೆ. ಅಲ್ಲದೇ ಅದನ್ನು ಪಾರ್ವತಿ ಸಿದ್ದರಾಮಯ್ಯ ಅವರು ಖರೀದಿಸುವಾಗ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಳ್ಳದೇ ನೋಂದಣಿ ಅಧಿಕಾರಿಗಳನು ತನಿದ್ದ ಕಡೆಯೇ ಕರೆಸಿಕೊಂಡು ಮಾರಾಟ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.
ಅದೇ ರೀತಿ ಮುಡಾ ಮಾಜಿ ಆಯುಕ್ತ ನಟೇಶ್ ಅವರು ಸೈಯದ್ ಅಲಿ ಅವರಿಗೆ ಕಾನೂನು ಬಾಹಿರವಾಗಿ ನಿವೇಶನಗಳನ್ನು ಮಾರಾಟ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಹಿನ್ನಲೆ ಸೈಯದ್ ಅಲಿ ಅವರು ನಟೇಶ್ ಹೆಂಡತಿಯ ಸೋದರ ಮಾವ ರಾಜಶೇಖರ್ ಅವರ ಹೆಂಡತಿ ತಾರ ಅವರಿಗೆ ಒಂದು ಸೈಟ್ ಮಂಜೂರು ಮಾಡಿದ್ದಾರೆ. ಈ ಕಾರಣಕ್ಕೆ ಈ ಎಲ್ಲವನ್ನೂ ತನಿಖೆ ಮಾಡಲು ಲೋಕಾಯುಕ್ತಕ್ಕೆ ಮತ್ತಷ್ಟು ದಾಖಲೆಯೊಂದಿಗೆ ಮನವಿ ಪತ್ರ ನೀಡಿದ್ದೇನೆ ಎಂದು ತಿಳಿಸಿದರು.
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…
ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…
ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…