ಮೈಸೂರು: ರಂಗಾಯಣ ಆವರಣದಲ್ಲಿ ಬಹೂರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ವೇದಿಕೆ ಸಜ್ಜುಗೊಂಡಿದ್ದು, ಮಕರ ಸಂಕ್ರಾಂತಿಯ(ಜ.14) ದಿನದಿಂದ ಆರು ದಿನಗಳ ಕಾಲ ನಾಟಕೋತ್ಸವವು ರಂಗಾಸಕ್ತರನ್ನು ರಂಜಿಸಲಿದೆ.
ಮುಧುವಣಗಿತ್ತಿಂತೆ ಸಿಂಗಾರಗೊಂಡಿರುವ ರಂಗಾಯಣದ ಸುತ್ತಲೂ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ವಿವಿಧ ಆಕರ್ಷಕ ಬಣ್ಣಗಳಿಂದ ಕಂಗೊಳಿಸುತ್ತಿರುವ ಬಹುರೂಪಿಗೆ ವಿವಿಧ ಭಾಷೆಯ ನಾಟಕಗಳು, ಚಲನಚಿತ್ರೋತ್ಸವ, ಭಿತ್ತಿಚಿತ್ರ ಪ್ರದರ್ಶನ, ಕರಕುಶಲ ವಸ್ತು ಪ್ರದರ್ಶನ, ಪುಸ್ತಕ ಪ್ರದರ್ಶನ, ದೇಸಿ ಆಹಾರ ಮೇಳ ಹಾಗೂ ರಾಷ್ಟ್ರೀಯ ವಿಚಾರ ಸಂಕಿರಣ ಸೇರಿದಂತೆ ಹಲವು ಆಕರ್ಷಕ ಪ್ರದರ್ಶನಗಳು ವಿಶೇಷ ಮೆರುಗು ನೀಡಲಿವೆ.
ಒಂದು ವಾರ ನಡೆಯಲಿರುವ ಬಹುರೂಪಿ ಉತ್ಸವದಲ್ಲಿ ದೇಶಾದ್ಯಂತದ ೫೦೦ಕ್ಕೂ ಹೆಚ್ಚಿನ ರಂಗಕಲಾವಿದರು, ೩೦೦ಕ್ಕೂ ಹೆಚ್ಚಿನ ಜನಪದ ಕಲಾವಿದರು ಭಾಗವಹಿಸುವ ನಿರೀಕ್ಷೆ ಇದೆ.
ಜ.೧೪ ರಂದು ಸಂಜೆ ೫.೩೦ಕ್ಕೆ ವನರಂಗದಲ್ಲಿ ಬಹುರೂಪಿ ನಾಟಕೋತ್ಸವಕ್ಕೆ ನಟ, ಹಿರಿಯ ರಂಗಕರ್ಮಿ ಅತುಲ್ ಕುಲಕರ್ಣಿ ಚಾಲನೆ ನೀಡುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವರು. ಕರಕುಶಲ ಮಳಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸುವರು. ಸಂಸದ ಯದುವೀರ ಒಡೆಯರ್, ಶಾಸಕ ಕೆ.ಹರೀಶ್ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ರಂಗಾಯಣದ ಉಪ ನಿರ್ದೇಶಕ ಡಾ.ಎಂ.ಡಿ.ಸುದರ್ಶನ, ರಂಗಸಮಾಜದ ಸದಸ್ಯ ಸುರೇಶ್ ಬಾಬು ಮತ್ತಿತರರು ಹಾಜರಿರುತ್ತಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…