ಮೈಸೂರು : ಪ್ರತಿ ವರ್ಷದಂತೆ ಈ ಬಾರಿಯೂ ಸ್ವಚ್ಚ ಸರ್ವೇಕ್ಷಣ್ ಸಮೀಕ್ಷೆ ನಡೆಯುತ್ತಿದೆ. ಹೀಗಾಗಿ ಪ್ರಸಕ್ತ ಸಾಲಿನಲ್ಲಿ ಮೈಸೂರು ಮಹಾನಗರ ಪಾಲಿಕೆಯು ಸ್ವಚ್ಛ ನಗರಗಳಲ್ಲಿ ಟಾಪ್ 10ರ ಸ್ಥಾನ ಪಡೆಯಲು ಪಣತೊಟ್ಟಿದೆ.
ಈ ಹಿನ್ನೆಲೆ, ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸೀಫ್ ಮೈಸೂರು ಮಂದಿ ಸ್ವಚ್ಛತೆಗೆ ಹೆಚ್ಚು ಒತ್ತು ನೀಡುವ ಮೂಲಕ ಪಾಲಿಕೆಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ಸ್ವಚ್ಛ ಸರ್ವೇಕ್ಷಣ ಈಗಾಗಲೇ ಒಂದು ಭಾಗ ಮುಗಿಸಿ ಎರಡನೇ ಹಂತಕ್ಕೆ ಕಾಲಿಟ್ಟಿದೆ. ನೀರು ಮತ್ತು ಕಸ ವಿಂಗಡಣೆ ವಿಚಾರದಲ್ಲಿ ರೇಟಿಂಗ್ ಪ್ರಕ್ರಿಯೆ ನಡೆಯುತ್ತಿದೆ. 27ನೇ ಸ್ಥಾನಕ್ಕೆ ಕುಸಿತ ಕಂಡಿದ್ದ ಮೈಸೂರ ನಗರವನ್ನ ಟಾಪ್ 10 ರಗೆ ತೆಗೆದುಕೊಂಡು ಹೋಗುವ ಗುರಿ ಹೊಂದಿದ್ದೇವೆ. ಇದಕ್ಕಾಗಿ ನಾಗರೀಕರು ಧನಾತ್ಮಕ ಪ್ರತಿಕ್ರಿಯೆ ನೀಡಿ ಸಹಕರಿಸಬೇಕು. ರಸ್ತೆಗಳಲ್ಲಿ ಕಸ ಬೀಸಾಡುವುದನ್ನ ನಿಲ್ಲಿಸಬೇಕು. ಸ್ವಚ್ಛತಾ ಅಭಿಯಾನದಲ್ಲಿ ಸಾರ್ವಜನಿಕರ ಪಾಲ್ಗೊಂಡು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ತೆರಿಗೆ ಪಾವತಿಗೆ 5% ವಿನಾಯಿತಿ
ಸಾರ್ವಜನಿಕ ಆಸ್ತಿ ಮೇಲಿನ ತೆರಿಗೆ ಪಾವತಿಗೆ ಪ್ರತಿ ವರ್ಷದಂತೆ ಈ ವರ್ಷವೂ 5% ವಿನಾಯಿತಿ ನೀಡಲಾಗಿದೆ. ಮೈಸೂರಿನ ಜನರು ಈ ಅವಕಾಶವನ್ನ ಸದುಪಯೋಗ ಪಡಿಸಿಕೊಳ್ಳಿ. ಇದರಿಂದ ನಿಮಗೂ ಅನುಕೂಲವಾಗುತ್ತೆ. ಪಾಲಿಕೆಗೂ ಆದಾಯಕ್ಕೂ ಅನುಕೂಲವಾಗುತ್ತದೆ ಎಂದು ಹೇಳಿದರು.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…