ಮೈಸೂರು: ಎಚ್.ಡಿ.ತಾಲ್ಲೂಕಿನ ವಿವಿಧೆಡೆ ಐಸ್ಕ್ರೀಮ್ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೋಟಿಸ್ ಜಾರಿಗೊಳಿಸಿ ದಂಡ ವಿಧಿಸಿದ್ದಾರೆ.
ಹೆಗ್ಗಡದೇವನಕೋಟೆ(ಎಚ್.ಡಿ. ಕೋಟೆ) ತಾಲ್ಲೂಕಿನ ಹ್ಯಾಂಡ್ ಪೋಸ್ಟ್ ಹಾಗೂ ಹಂಪಾಪುರ ಗ್ರಾಮದಲ್ಲಿರುವ ಐಸ್ಕ್ರೀಮ್ ತಯಾರಿಕಾ ಘಟಕಗಳಿಗೆ ಆಹಾರ ಸುರಕ್ಷತಾ ಅಧಿಕಾರಿ ಡಾ.ರವಿಕುಮಾರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರತಿಯೊಂದು ಕಂಪೆನಿಯ ಐಸ್ಕ್ರೀಮ್ಗಳನ್ನು ಪರಿಶೀಲನೆ ನಡೆಸಿ ನೋಟಿಸ್ ಜಾರಿ ಮಾಡಿ ದಂಡ ವಿಧಿಸಲಾಗಿದೆ.
ಈ ಸಂದರ್ಭದಲ್ಲಿ ಆಹಾರ ಸುರಕ್ಷತಾಧಿಕಾರಿ ಡಾ. ರವಿಕುಮಾರ್ ಅವರು ಮಾತನಾಡಿ, ಐಸ್ಕ್ರೀಮ್ ತಯಾರಿಸುವ ವೇಳೆ ಸ್ಥಳಗಳನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ಪ್ರತಿಯೊಂದು ಐಸ್ಕ್ರೀಮ್ಗಳನ್ನು ತಯಾರಿಸುವಾಗ ಶುದ್ಧವಾದ ನೀರನ್ನು ಉಪಯೋಗಿಸಬೇಕು. ಯಾವುದೇ ರೀತಿಯ ಬಣ್ಣಗಳನ್ನು ಹಾಕಬಾರದು ಎಂದರು.
ಇನ್ನು ಫುಡ್ ಲೈಸನ್ಸ್ ಹೊಂದಿಲ್ಲದ ಘಟಕಗಳು ಕಡ್ಡಾಯವಾಗಿ ಒಂದು ವಾರದೊಳಗೆ ಲೈಸನ್ಸ್ ಪಡೆಯಬೇಕು. ಒಂದು ವೇಳೆ ಲೈಸೆನ್ಸ್ ಪಡೆಯದಿದ್ದರೆ ದಂಡ ವಿಧಿಸಿ ಕಾನೂನು ಕ್ರಮನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…