ಮೈಸೂರು

ಮೈಸೂರು: ಐಸ್‌ಕ್ರೀಮ್‌ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ ನೋಟಿಸ್‌ ನೀಡಿದ ಅಧಿಕಾರಿಗಳು

ಮೈಸೂರು: ಎಚ್‌.ಡಿ.ತಾಲ್ಲೂಕಿನ ವಿವಿಧೆಡೆ ಐಸ್‌ಕ್ರೀಮ್‌ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೋಟಿಸ್‌ ಜಾರಿಗೊಳಿಸಿ ದಂಡ ವಿಧಿಸಿದ್ದಾರೆ.

ಹೆಗ್ಗಡದೇವನಕೋಟೆ(ಎಚ್‌.ಡಿ. ಕೋಟೆ) ತಾಲ್ಲೂಕಿನ ಹ್ಯಾಂಡ್‌ ಪೋಸ್ಟ್‌ ಹಾಗೂ ಹಂಪಾಪುರ ಗ್ರಾಮದಲ್ಲಿರುವ ಐಸ್‌ಕ್ರೀಮ್‌ ತಯಾರಿಕಾ ಘಟಕಗಳಿಗೆ ಆಹಾರ ಸುರಕ್ಷತಾ ಅಧಿಕಾರಿ ಡಾ.ರವಿಕುಮಾರ್‌ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರತಿಯೊಂದು ಕಂಪೆನಿಯ ಐಸ್‌ಕ್ರೀಮ್‌ಗಳನ್ನು ಪರಿಶೀಲನೆ ನಡೆಸಿ ನೋಟಿಸ್‌ ಜಾರಿ ಮಾಡಿ ದಂಡ ವಿಧಿಸಲಾಗಿದೆ.

ಈ ಸಂದರ್ಭದಲ್ಲಿ ಆಹಾರ ಸುರಕ್ಷತಾಧಿಕಾರಿ ಡಾ. ರವಿಕುಮಾರ್ ಅವರು ಮಾತನಾಡಿ, ಐಸ್‌ಕ್ರೀಮ್‌ ತಯಾರಿಸುವ ವೇಳೆ ಸ್ಥಳಗಳನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ಪ್ರತಿಯೊಂದು ಐಸ್‌ಕ್ರೀಮ್‌ಗಳನ್ನು ತಯಾರಿಸುವಾಗ ಶುದ್ಧವಾದ ನೀರನ್ನು ಉಪಯೋಗಿಸಬೇಕು. ಯಾವುದೇ ರೀತಿಯ ಬಣ್ಣಗಳನ್ನು ಹಾಕಬಾರದು ಎಂದರು.

ಇನ್ನು ಫುಡ್‌ ಲೈಸನ್ಸ್‌ ಹೊಂದಿಲ್ಲದ ಘಟಕಗಳು ಕಡ್ಡಾಯವಾಗಿ ಒಂದು ವಾರದೊಳಗೆ ಲೈಸನ್ಸ್‌ ಪಡೆಯಬೇಕು. ಒಂದು ವೇಳೆ ಲೈಸೆನ್ಸ್‌ ಪಡೆಯದಿದ್ದರೆ ದಂಡ ವಿಧಿಸಿ ಕಾನೂನು ಕ್ರಮನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

34 mins ago

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

12 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

12 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

12 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

13 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

13 hours ago