ಮೈಸೂರು

ಮೈಸೂರು | ಡಿ.1 ರಿಂದ ಒನ್ ನೇಷನ್ ಒನ್ ಕಾರ್ಡ್ ಜಾರಿ : ಸಾರಿಗೆ ಸಚಿವ ರಾಮಲಿಂಗರೆಡ್ಡಿ

ಮೈಸೂರು : ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳಿಗೆ ಮದ್ಯವರ್ತಿಗಳು ಹಾಗೂ ವಾಹನ ಚಾಲನಾ ತರಬೇತಿ ಶಾಲೆಯವರು ಬರುವ ಚಾಳಿಯಿದ್ದು, ಇದಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಗಳಿಗೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದರು.

ಅವರು ಶನಿವಾರ ಮೈಸೂರು ದಕ್ಷಿಣ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಪ್ರಾದೇಶಿಕ ಸಾರಿಗೆ ಇಲಾಖೆಯ ೩೧ ಸೇವೆಗಳನ್ನು ಸಕಾಲದಲ್ಲಿ ಆನ್‌ಲೈನ್ ಮೂಲಕ ನೀಡಲಾಗುತ್ತಿದೆ. ಸಾರ್ವಜನಿಕರು ಅನಿವಾರ್ಯವಾಗಿ ಕಚೇರಿಗೆ ಅಲೆದಾಡುವುದು ಬೇಕಿಲ್ಲ,. ಸಕಾಲ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.

ಡಿಸೆಂಬರ್ ೧ ರಿಂದ ಒನ್ ನೇಷನ್ ಒನ್ ಕಾರ್ಡ್ ಯೋಜನೆಗೆ ಚಾಲನೆ ನೀಡಲಾಗುವುದು. ಆರ್.ಸಿ ಕಾರ್ಡ್, ಹಾಗೂ ಡಿ.ಎಲ್‌ನಲ್ಲಿ ಕ್ಯೂಆರ್ ಕೋಡ್‌ಇದ್ದು, ಇದರಲ್ಲಿ ವಿವರವಾದ ಮಾಹಿತಿ ಇರುತ್ತದೆ ಎಂದರು.
ಮೈಸೂರು ವಿಭಾಗದ ವ್ಯಾಪ್ತಿಯ ಪ್ರಾದೇಶಿಕ ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿ ೨೦೨೫ ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ ೬೪೮ ಕೋಟಿ ರೂ ರಜಸ್ವ ಸಂಗ್ರಹಿಸಲಾಗಿದೆ. ತಪಾಸಣೆ ವೇಳೆ ೧೫.೧೭ ಕೋಟಿ ರೂ ದಂಡ ವಸೂಲಿ ಮಾಡಲಾಗಿರುತ್ತದೆ ಎಂದರು.

ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಬಸ್ ನಿಲ್ದಾಣಗಳಲ್ಲಿ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಬಸ್ ನಿಲ್ದಾಣಗಳ ಶೌಚಾಲಯಗಳಿಗೆ ಭೇಟಿ ನೀಡಿ ತಪಾಸಣೆ ನಡಸಬೇಕು೧ ೦೦ ವಿದ್ಯುತ್ ಚಾಲಿತ ಬಸ್ ಕೆ.ಎಸ್.ಆರ್.ಟಿ.ಸಿ ವತಿಯಿಂದ ಮೈಸೂರು ಜಿಲ್ಲೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಇದರ ನಿರ್ವಹಣೆಗಗಿ ಬನ್ನಿಮಂಟಪದ ಡಿಪೋನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ತಗಡೂರಿನಲ್ಲಿ ಬಸ್ ನಿಲ್ದಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಮೈಸೂರು ನಗರ ಬೆಳೆಯುತ್ತಿದ್ದು, ಹೊರ ವಲಯದ ರಿಂಗ್ ರೋಡ್‌ಗಳಲ್ಲಿ ಬಸ್ ಹಾಗೂ ಟ್ರಿಪ್‌ಗಳ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ೪ ಹೊಸ ಬಸ್ ನಿಲ್ದಾಣಕ್ಕೆ ಸ್ಥಳ ಗುರುತಿಸಲು ಯೋಜಿಸಲಾಗುತ್ತಿದೆ ಎಂದರು. ೧೨೦ ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೈಸೂರು ಹೊಸ ಗ್ರಾಮಾಂತರ ಬಸ್ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿರುತ್ತದೆ ಎಂದರು.

ಸಭೆಯಲ್ಲಿ ಅಪರ ಸಾರಿಗೆ ಆಯುಕ್ತೆ ಓಂಕಾರೇಶ್ವರಿ ಅವರು ಮೈಸೂರು ವಿಭಾಗದ ಪ್ರಗತಿಯ ಬಗ್ಗೆ ಸಚಿವರಿಗೆ ವಿವರಿಸಿದರು. ಸಭೆಯಲ್ಲಿ ಜಂಟಿ ಸಾರಿಗೆ ಅಯುಕ್ತ ಹಾಗೂ ಮೈಸೂರು ದಕ್ಷಿಣ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ್ ಚೌಹಣ್, ಮೈಸೂರು ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ, ಉಪ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಚಂದ್ರ, ಮೈಸೂರು ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಶ್ರೀನಿವಾಸ್, ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

5 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

5 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

6 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

7 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

8 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

9 hours ago