ganjeefa raghupati bhat
ಮೈಸೂರು : ಇಂದಿನಿಂದ ಜು. 26 ರವರೆಗೆ ಅರಮನೆ ಚಿತ್ರಕಲಾವಿದ ಎಸ್.ಆರ್.ಅಯ್ಯಂಗಾರ್ ರಚಿಸಿರುವ ಚಿತ್ರಕಲೆಗಳನ್ನು ಒಡೆಯರ್ ಸೆಂಟರ್ ಫಾರ್ ಆರ್ಕಿಟೆಕ್ಚರ್ನಲ್ಲಿ ಪ್ರದರ್ಶನಕ್ಕಿಡಲಾಗಿದೆ.
ಖ್ಯಾತ ಗಂಜೀಫಾ ಚಿತ್ರಕಲಾವಿದ ಗಂಜೀಫಾ ರಘುಪತಿ ಭಟ್ ಚಿತ್ರಕಲೆ ವೀಕ್ಷಿಸಿ ಬಳಿಕ ಚಾಲನೆ ನೀಡಿದರು. ಪ್ರದರ್ಶನದಲ್ಲಿ ಮೈಸೂರು ಅರಮನೆ ಆವರಣ, ನೈಸರ್ಗಿಕ ಚಿತ್ರಣ, ಶಿಲ್ಪಕಲೆಗಳಂತ ವಿಶಿಷ್ಟ ರೀತಿಯ ಹತ್ತು-ಹಲವು ಪ್ರಾಚೀನ ಚಿತ್ರಕಲೆಗಳನ್ನು ವೀಕ್ಷಿಸಿದರು.
ಬಳಿಕ ಮಾತನಾಡಿದ ಅವರು, ಕರ್ನಾಟಕದ ಚಿತ್ರಕಲೆ ಅತ್ಯಂತ ಹಿರಿಮೆ ಹಾಗೂ ವೈಶಿಷ್ಠತೆಯನ್ನು ಒಳಗೊಂಡಿದೆ. ಶ್ರೀಮಂತವಾದ ವಿಜಯನಗರ ಸಾಮ್ರಾಜ್ಯ ಪತನವಾದ ನಂತರದಲ್ಲಿ ಮೈಸೂರು ಸಂಸ್ಥಾನಕ್ಕೆ ಭೇಟಿ ನೀಡಿದ ಅನೇಕ ಕಲಾವಿದರು, ಅಂದಿನ ಕಾಲದಲ್ಲಿ ಚಿತ್ರ ಮಾಂತ್ರಿಕ ರವಿವರ್ಮನ ಪ್ರಭಾವಕ್ಕೊಳಗಾಗಿ ಚಿತ್ರಿಸಿರುವ ಚಿತ್ರಕಲೆಗಳು ಇಂದಿಗೂ ಹೆಚ್ಚು ಆಕರ್ಷಣಿಯವಾಗಿದ್ದು, ಎಲ್ಲರ ಗಮನ ಸೆಳೆಯುವಂತಿವೆ. ಅಂತಹ ಅತ್ಯಧ್ಬುತವಾದ ಚಿತ್ರಗಳಲ್ಲಿ ಮೈಸೂರು ಅರಮನೆಯ ಚಿತ್ರಕಲಾವಿದರಾಗಿದ್ದ ಎಸ್.ಆರ್.ಅಯ್ಯಂಗಾರ್ ಅವರು ರಚಿಸಿರುವ ಚಿತ್ರಗಳು ಬಹುಮುಖ್ಯವಾಗಿವೆ. ಅವರ ಚಿತ್ರಕಲೆಗಳನ್ನು ವೀಕ್ಷಿಸುತಿದ್ದರೆ, ಅವುಗಳಲ್ಲಿ ಸತ್ಯ-ಸತ್ವವೆಂಬುದನ್ನು ಒಳಗೊಂಡಿದೆ ಎಂದು ಅಭಿಪ್ರಾಯಿಸಿದರು.
ಮೈಸೂರಿನಲ್ಲಿ ಚಿತ್ರಕಲೆ ಉಳಿವು, ಮಹತ್ವ ದೊರೆತಿರುವುದಕ್ಕೆ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರು ಚಿತ್ರಕಲೆಗೆ ಕೊಟ್ಟಂತಹ ಕೊಡುಗೆ ಮತ್ತು ಪ್ರಾಮುಖ್ಯತೆಯೇ ಕಾರಣ. ಇತ್ತೀಚೆಗೆ ಕೃತಕ ಬುದ್ದಿಮತ್ತೆ(ಎಐ) ತಂತ್ರಜ್ಞಾನ ಯುಗದಲ್ಲಿ ಚಿತ್ರಕಲೆ ಮೇಲಿನ ಆಸಕ್ತಿ ಕಡಿಮೆಯಾಗುತ್ತಿದ್ದು, ಎಲ್ಲವು ಕೃತಕವಾಗಿ ಸೃಷ್ಟಿಗೊಳ್ಳುತ್ತಿದೆ ಎಂದು ಆತಂಕಿಸಿದರು.
ಪ್ರಸ್ತುತದಲ್ಲಿ ಚಿತ್ರಕಲೆಯನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿತ್ರಕಲೆಯ ಪ್ರೋತ್ಸಾಹಕ್ಕೆ ಪೂರಕವಾದ, ತರಬೇತಿ, ಕಾರ್ಯಚಟುವಟಿಕೆಗಳನ್ನು ರೂಪಿಸಿ ಹೆಚ್ಚಿನ ಒತ್ತು ನೀಡಬೇಕು. ಮುಖ್ಯವಾಗಿ ಸ್ಥಳೀಯತೆಯ ಉಳಿವಿಗಾಗಿ ದೇಶೀಯ ಚಿತ್ರಕಲೆಯನ್ನು ಉಳಿಸುವ ಕೆಲಸವಾಗಬೇಕಿದೆ. ಇದಲ್ಲದೇ ಚಿತ್ರಕಲೆ ಪ್ರೋತ್ಸಾಹಕ್ಕಾಗಿ ಇದೇ ಸ್ಥಳದಲ್ಲಿ ಶಾಶ್ವತವಾದ ಚಿತ್ರಕಲಾ ಗ್ಯಾಲರಿಯನ್ನು ಸ್ಥಾಪಿಸಬೇಕು ಎಂದು ಬೇಡಿಕೆಯನ್ನು ವ್ಯಕ್ತಪಡಿಸಿದರು.
ಅರಮನೆ ಕಲಾವಿದರಾದ ದಿ.ಎಸ್.ಆರ್.ಅಯ್ಯಂಗಾರ್ ಮೊಮ್ಮಗ ಅವಿನಾಶ್ ಪಾಠಕ್, ಆರ್ಕಿಟೆಕ್ಚರ್ ಬಿ.ಎಲ್.ಮಂಜುನಾಥ್, ಒಡೆಯರ್ ಸೆಂಟರ್ ಫಾರ್ ಆರ್ಕಿಟೆಕ್ಚರ್ನ ಸಹಾಯಕ ಪ್ರಾಧ್ಯಾಪಕ ಮದ್ವೇಶ್ ಪಾಂಡುರಂಗಿ ಇತರರಿದ್ದರು
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…