ಮೈಸೂರು

ಮೈಸೂರು | ಇಂದಿನಿಂದ ಚಿತ್ರಕಲೆ ಪ್ರದರ್ಶನ

ಮೈಸೂರು : ಇಂದಿನಿಂದ ಜು. 26 ರವರೆಗೆ ಅರಮನೆ ಚಿತ್ರಕಲಾವಿದ ಎಸ್.ಆರ್.ಅಯ್ಯಂಗಾರ್ ರಚಿಸಿರುವ ಚಿತ್ರಕಲೆಗಳನ್ನು ಒಡೆಯರ್ ಸೆಂಟರ್ ಫಾರ್ ಆರ್ಕಿಟೆಕ್ಚರ್‌ನಲ್ಲಿ ಪ್ರದರ್ಶನಕ್ಕಿಡಲಾಗಿದೆ.

ಖ್ಯಾತ ಗಂಜೀಫಾ ಚಿತ್ರಕಲಾವಿದ ಗಂಜೀಫಾ ರಘುಪತಿ ಭಟ್ ಚಿತ್ರಕಲೆ ವೀಕ್ಷಿಸಿ ಬಳಿಕ ಚಾಲನೆ ನೀಡಿದರು. ಪ್ರದರ್ಶನದಲ್ಲಿ ಮೈಸೂರು ಅರಮನೆ ಆವರಣ, ನೈಸರ್ಗಿಕ ಚಿತ್ರಣ, ಶಿಲ್ಪಕಲೆಗಳಂತ ವಿಶಿಷ್ಟ ರೀತಿಯ ಹತ್ತು-ಹಲವು ಪ್ರಾಚೀನ ಚಿತ್ರಕಲೆಗಳನ್ನು ವೀಕ್ಷಿಸಿದರು.

ಬಳಿಕ ಮಾತನಾಡಿದ ಅವರು, ಕರ್ನಾಟಕದ ಚಿತ್ರಕಲೆ ಅತ್ಯಂತ ಹಿರಿಮೆ ಹಾಗೂ ವೈಶಿಷ್ಠತೆಯನ್ನು ಒಳಗೊಂಡಿದೆ. ಶ್ರೀಮಂತವಾದ ವಿಜಯನಗರ ಸಾಮ್ರಾಜ್ಯ ಪತನವಾದ ನಂತರದಲ್ಲಿ ಮೈಸೂರು ಸಂಸ್ಥಾನಕ್ಕೆ ಭೇಟಿ ನೀಡಿದ ಅನೇಕ ಕಲಾವಿದರು, ಅಂದಿನ ಕಾಲದಲ್ಲಿ ಚಿತ್ರ ಮಾಂತ್ರಿಕ ರವಿವರ್ಮನ ಪ್ರಭಾವಕ್ಕೊಳಗಾಗಿ ಚಿತ್ರಿಸಿರುವ ಚಿತ್ರಕಲೆಗಳು ಇಂದಿಗೂ ಹೆಚ್ಚು ಆಕರ್ಷಣಿಯವಾಗಿದ್ದು, ಎಲ್ಲರ ಗಮನ ಸೆಳೆಯುವಂತಿವೆ. ಅಂತಹ ಅತ್ಯಧ್ಬುತವಾದ ಚಿತ್ರಗಳಲ್ಲಿ ಮೈಸೂರು ಅರಮನೆಯ ಚಿತ್ರಕಲಾವಿದರಾಗಿದ್ದ ಎಸ್.ಆರ್.ಅಯ್ಯಂಗಾರ್ ಅವರು ರಚಿಸಿರುವ ಚಿತ್ರಗಳು ಬಹುಮುಖ್ಯವಾಗಿವೆ. ಅವರ ಚಿತ್ರಕಲೆಗಳನ್ನು ವೀಕ್ಷಿಸುತಿದ್ದರೆ, ಅವುಗಳಲ್ಲಿ ಸತ್ಯ-ಸತ್ವವೆಂಬುದನ್ನು ಒಳಗೊಂಡಿದೆ ಎಂದು ಅಭಿಪ್ರಾಯಿಸಿದರು.

ಮೈಸೂರಿನಲ್ಲಿ ಚಿತ್ರಕಲೆ ಉಳಿವು, ಮಹತ್ವ ದೊರೆತಿರುವುದಕ್ಕೆ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರು ಚಿತ್ರಕಲೆಗೆ ಕೊಟ್ಟಂತಹ ಕೊಡುಗೆ ಮತ್ತು ಪ್ರಾಮುಖ್ಯತೆಯೇ ಕಾರಣ. ಇತ್ತೀಚೆಗೆ ಕೃತಕ ಬುದ್ದಿಮತ್ತೆ(ಎಐ) ತಂತ್ರಜ್ಞಾನ ಯುಗದಲ್ಲಿ ಚಿತ್ರಕಲೆ ಮೇಲಿನ ಆಸಕ್ತಿ ಕಡಿಮೆಯಾಗುತ್ತಿದ್ದು, ಎಲ್ಲವು ಕೃತಕವಾಗಿ ಸೃಷ್ಟಿಗೊಳ್ಳುತ್ತಿದೆ ಎಂದು ಆತಂಕಿಸಿದರು.

ಪ್ರಸ್ತುತದಲ್ಲಿ ಚಿತ್ರಕಲೆಯನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿತ್ರಕಲೆಯ ಪ್ರೋತ್ಸಾಹಕ್ಕೆ ಪೂರಕವಾದ, ತರಬೇತಿ, ಕಾರ್ಯಚಟುವಟಿಕೆಗಳನ್ನು ರೂಪಿಸಿ ಹೆಚ್ಚಿನ ಒತ್ತು ನೀಡಬೇಕು. ಮುಖ್ಯವಾಗಿ ಸ್ಥಳೀಯತೆಯ ಉಳಿವಿಗಾಗಿ ದೇಶೀಯ ಚಿತ್ರಕಲೆಯನ್ನು ಉಳಿಸುವ ಕೆಲಸವಾಗಬೇಕಿದೆ. ಇದಲ್ಲದೇ ಚಿತ್ರಕಲೆ ಪ್ರೋತ್ಸಾಹಕ್ಕಾಗಿ ಇದೇ ಸ್ಥಳದಲ್ಲಿ ಶಾಶ್ವತವಾದ ಚಿತ್ರಕಲಾ ಗ್ಯಾಲರಿಯನ್ನು ಸ್ಥಾಪಿಸಬೇಕು ಎಂದು ಬೇಡಿಕೆಯನ್ನು ವ್ಯಕ್ತಪಡಿಸಿದರು.

ಅರಮನೆ ಕಲಾವಿದರಾದ ದಿ.ಎಸ್.ಆರ್.ಅಯ್ಯಂಗಾರ್ ಮೊಮ್ಮಗ ಅವಿನಾಶ್ ಪಾಠಕ್, ಆರ್ಕಿಟೆಕ್ಚರ್ ಬಿ.ಎಲ್.ಮಂಜುನಾಥ್, ಒಡೆಯರ್ ಸೆಂಟರ್ ಫಾರ್ ಆರ್ಕಿಟೆಕ್ಚರ್‌ನ ಸಹಾಯಕ ಪ್ರಾಧ್ಯಾಪಕ ಮದ್ವೇಶ್ ಪಾಂಡುರಂಗಿ ಇತರರಿದ್ದರು

ಆಂದೋಲನ ಡೆಸ್ಕ್

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

4 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

7 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

8 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

8 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

8 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

8 hours ago