ಮೈಸೂರು

ಮೈಸೂರು | ಕ್ಷಯ ಮುಕ್ತ ಜಿಲ್ಲೆಗೆ ಪಣ ತೊಡಿ ; ಜಿ.ಪಂ ಸಿಇಒ

ಕ್ಷಯ ಮುಕ್ತ ಗ್ರಾಮ ಪಂಚಾಯತ್ ಅಭಿಯಾನ ಕಾರ್ಯಕ್ರಮ

ಮೈಸೂರು :  ಜಿಲ್ಲೆಯನ್ನು ಕ್ಷಯ ಮುಕ್ತವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವ ಮೂಲಕ ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯಿತ್ರಿ ಹೇಳಿದರು.

ಇಂದು ಜಿಲ್ಲಾ ಪಂಚಾಯತ್ ಶ್ರೀ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಕ್ಷಯಮುಕ್ತ ಗ್ರಾಮ ಪಂಚಾಯತ್ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯತ್ ಸದಸ್ಯರುಗಳಿಗೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದೆ. ಕ್ಷಯ ಇರುವ ರೋಗಿಗಳಿಗೆ ಸರ್ಕಾರದಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಕ್ಷಯ ರೋಗ ನಿರ್ಮೂಲನೆ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಕ್ಷಯ ರೋಗಿಗಳಿಗೆ ಅರಿವನ್ನು ಮೂಡಿಸಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿರುವ ಉದ್ದೇಶ ತಳಮಟ್ಟದಲ್ಲಿ ಗ್ರಾಮ ಪಂಚಾಯಿತಿ ಇದೆ. ನಾವು ಯಾವುದೇ ಯೋಜನೆಯನ್ನು ಅನುಷ್ಠಾನ ಮಾಡಬೇಕು ಎಂದರೆ ಗ್ರಾಮ ಪಂಚಾಯತ್ ಮಟ್ಟಕ್ಕೆ ನಾವು ತೆಗೆದುಕೊಂಡು ಹೋದರೆ ಮಾತ್ರ ಅದು ಅನುಷ್ಠಾನ ಮಾಡಲಿಕ್ಕೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಅನುಷ್ಠಾನ ಮಾಡುವಲ್ಲಿ ಪ್ರಮುಖರಾಗಿದ್ದು, ನೀವು ಎಲ್ಲಾ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳ ಜೊತೆ ಒಟ್ಟುಗೂಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅನುಷ್ಠಾನ ಮಾಡಬೇಕು. ಎಲ್ಲರ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನವಾಗಿಸಬೇಕು ಎಂದು ಹೇಳಿದರು.

ಈ ಅಭಿಯಾನವನ್ನು ಯಶಸ್ವಿಗೊಳಿಸಲು ಟಾಸ್ಕ್ ಪೋರ್ಸ್ ರಚನೆ ಮಾಡಬೇಕು. ಈ ಟಾಸ್ಕ್ ಪೋರ್ಸ್ ರಚಿಸುವ ನಿಟ್ಟಿನಲ್ಲಿ ತಮಗೆ ಕೊಟ್ಟಿರುವಂತಹ ಮಾರ್ಗ ಸೂಚಿಗಳ ಅನ್ವಯ ಕ್ಷೇತ್ರದಲ್ಲಿ ಕೆಲಸ ಮಾಡಿ ಕ್ಷಯ ರೋಗಿಗಳ ಸಂಖ್ಯೆ ಕಡಿಮೆ ಮಾಡಬೇಕು. ಕ್ಷಯರೋಗಿಗಳನ್ನು ಗುರುತಿಸುವುದು ಅವರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವಂತಹ ಕೆಲಸವನ್ನು ಟಾಸ್ಕ್ ಪೋರ್ಸ್ ಕಡೆಯಿಂದ ನೀವು ಅನುಷ್ಠಾನ ಮಾಡಬೇಕು ಎಂದು ಸೂಚಿಸಿದರು.

ಈ ಕಾರ್ಯಕ್ರಮದ ಜೊತೆಗೆ ಆರೋಗ್ಯ ಇಲಾಖೆಯ ಇತರ ಯೋಜನೆಗಳನ್ನು ಇಲ್ಲಿ ಅಳವಡಿಸಬೇಕು. ಇದರ ಜೊತೆಗೆ ಮಾನಸಿಕ ಆರೋಗ್ಯ ಹಾಗೂ ಒತ್ತಡ ನಿರ್ವಹಣೆ ಹೇಗೆ ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಕ್ಷಯ ರೋಗವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರವು ಕೂಡ ಕ್ಷಯ ಮುಕ್ತ ಭಾರತ ಮಾಡಬೇಕು ಎಂದು ಹಲವು ಯೋಜನೆ ರೂಪಿಸಿದ್ದು ಈ ನಿಟ್ಟಿನಲ್ಲಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಳ್ಳಲಾಗಿದೆ. ನಮ್ಮ ಜೊತೆಗೂಡಿ ಹಲವಾರು ಸ್ವಯಂ ಸೇವಕರು ಹಾಗೂ ಸಂಘಟನೆಗಳೂ ಕೆಲಸ ಮಾಡುತ್ತಿವೆ. ಇದರ ಜೊತೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾತ್ರವಲ್ಲದೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಕೂಡ ಸೇರಿ ಯಶಸ್ವಿಯಾಗಿ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

ಈ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಪ್ರಚಾರ ಕೊಡುವುದರ ಮೂಲಕ ತಮ್ಮ ಭಾಗಗಳಲ್ಲಿ ಕ್ಷಯ ಮುಕ್ತ ಮಾಡುವಂತೆ ಕೆಲಸ ಮಾಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕ್ಷಯ ಹೆಚ್ಚಾಗಿ ಕಂಡು ಬರುತ್ತದೆ ಆದ್ದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚು ಒತ್ತನ್ನು ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಪಿ.ಸಿ ಕುಮಾರಸ್ವಾಮಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳಾದ ಡಾ. ಜಯಂತ್ ಎಂ.ಎಸ್ ಅವರು ಸೇರಿದಂತೆ ವಿವಿದ ಇಲಾಖೆಗಳ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದೆಹಲಿಯಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ

ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ…

4 hours ago

ರಾಜ್ಯದಲ್ಲಿ ಮತ್ತಷ್ಟು ತಗ್ಗಲಿದೆ ಮಳೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ…

6 hours ago

ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಎಚ್ಚರಿಕೆ

ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ…

6 hours ago

ಓದುಗರ ಪತ್ರ: ಸಚಿವರಿಬ್ಬರ ಹೇಳಿಕೆಗಳು ‘ಲಕ್ಷ್ಮಣರೇಖೆ’ ಮೀರದಿರಲಿ

ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು…

12 hours ago

ಓದುಗರ ಪತ್ರ: ‘ಸಂಧ್ಯಾ ಕಿರಣ’ ಯೋಜನೆಯ ವ್ಯಾಪ್ತಿಗೆ ವಯೋನಿಗದಿ ಬೇಡ

ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…

12 hours ago

ಓದುಗರ ಪತ್ರ: ಗುರು-ಶಿಷ್ಯರ ಸಂಬಂಧ ವರ್ಣನಾತೀತ

ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…

12 hours ago