ಮೈಸೂರು

ಮೈಸೂರು | ನಗರದ ಹಲವೆಡೆ ನಾಳೆ, ನಾಳಿದ್ದು ವಿದ್ಯುತ್ ವ್ಯತ್ಯಯ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವತಿಯಿಂದ ರಾಮಕೃಷ್ಣನಗರ ಉಪ ವಿಭಾಗದ ವ್ಯಾಪ್ತಿಯ ೬೬/೧೧ ಕೆ.ವಿ. ಉದ್ಬೂರು ವಿದ್ಯುತ್ ವಿತರಣಾ ಕೇಂದ್ರ ಮತ್ತು ೬೬/೧೧ ಕೆ.ವಿ. ಜಯಪುರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಡಿ.೨ರಂದು ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಉದ್ಬೂರು ವಿವಿ ಕೇಂದ್ರದ ವ್ಯಾಪ್ತಿಯ ಪ್ರದೇಶಗಳು:
ಉದ್ಬೂರು, ಕೆಲ್ಲಹಳ್ಳಿ, ಟಿ.ಕಾಟೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಜಯಪುರ ವಿವಿ ಕೇಂದ್ರದ ವ್ಯಾಪ್ತಿಯ ಪ್ರದೇಶಗಳು: ಜಯಪುರ, ಬರಡನ ಪುರ, ಮಾವಿನಹಳ್ಳಿ, ದಾರಿಪುರ, ಡಿ. ಸಾಲುಂಡಿ, ಧನಗಳ್ಳಿ, ದೊಡ್ಡಹುಂಡಿ, ಕೆಂಚಲಗೂಡು, ಕೆಹೆಚ್ಬಿ, ಗೋಪಾಲಪುರ, ಮುಳ್ಳೂರು, ಹಾರೋಹಳ್ಳಿ, ಜಿ.ಜಿ. ಪುರ, ಮಂಡನಹಳ್ಳಿ, ಕಾಡನಹಳ್ಳಿ, ಮಾರ್ಬಳ್ಳಿ, ಮಾರ್ಬಳ್ಳಿ ಹುಂಡಿ, ಅರಸಿನಕೆರೆ, ಸೋಲಿಗರ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ವಿ.ವಿ ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:-ಕೊಳ್ಳೇಗಾಲ | ಕಾರುಗಳ ನಡುವೆ ಡಿಕ್ಕಿ : ನಾಲ್ವರು ಗಂಭೀರ

ಡಿ.3ರಂದೂ ವಿದ್ಯುತ್‌ ಇರಲ್ಲ
ಇನ್ನೂ ಬನ್ನಿಮಂಟಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ ಡಿ.೩ರಂದು ೩ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಕೆಲವು ಸೂಚಿತ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯ ಯವಾಗಲಿದೆ.

ಪ್ರದೇಶಗಳು: ಶಿವರಾತ್ರೀಶ್ವರ ನಗರ, ಕಾವೇರಿನಗರ, ಸಿದ್ದಿಕಿ ನಗರ ಬಿ ಮತ್ತು ಸಿ ಬಡಾವಣೆ, ಬನ್ನಿಮಂಟಪ, ಹೈವೇವೃತ್ತ, ಮೇದರ್ ಬ್ಲಾಕ್, ಹನುಮಂತನಗರ, ಹಲೀಂನಗರ, ಬಾಲಭವನ, ಜೆಎಸ್‌ಎಸ್‌ನಗರ ಡೆಂಟಲ್ ಕಾಲೇಜ್, ಸೇಂಟ್ ಜೋಸೆಫ್ ಆಸ್ಪತ್ರೆ, ಲಕ್ಷ್ಮೀಪುರ, ವರುಣ, ಸಿದ್ದಲಿಂಗಪುರ, ಕಳಸ್ತವಾಡಿ, ಶಾದನಹಳ್ಳಿ, ನಾಗನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಸೆಸ್ಕ್ ಎನ್.ಆರ್.ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆ ಕಾರ್ಯ ನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

3 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

7 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

8 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

8 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

13 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

13 hours ago