ಮೈಸೂರು

ಮೈಸೂರು | ಪೌರಕಾರ್ಮಿಕರಿಗೆ ಸರ್ಕಾರದ ಸೌಲಭ್ಯ ದೊರಕಿಸಿ ; ಜಿಲ್ಲಾಧಿಕಾರಿ

ಮೈಸೂರು: ಪೌರಕಾರ್ಮಿಕರು ಹಾಗೂ ಸ್ವಚ್ಛತಾಗಾರರ ಪಾತ್ರ ಬಹಳ ಮುಖ್ಯವಾಗಿದೆ. ಅವರಿಗೆ ವಿಶೇಷ ಗೌರವ ನೀಡಿ, ಕಾಲಕಾಲಕ್ಕೆ ದೊರೆಯುವ ಸರ್ಕಾರದ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ನಗರದ ಪಡುವಾರಹಳ್ಳಿಯ  ಬಾಬು ಜಗಜೀವನರಾಂ ಭವನದಲ್ಲಿ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಕಾಯ್ದೆ ಸೆಕ್ಷನ್ 24 ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 2024ನೇ ಸಾಲಿನಲ್ಲಿ  ಮಾನ್ಯುಯಲ್ ಸ್ಕ್ಯಾವೆಂಜರ್‌ ಗಳು  ಇಲ್ಲ ಎಂದು ವರದಿ ಹೇಳಿದೆ. ಇದೇ ರೀತಿ ಮುಂದೆ ಯಾರೂ ಕೂಡ ಮಾನ್ಯುಯಲ್ ಸ್ಕ್ಯಾವೆಂಜರ್ ವೃತ್ತಿ ಕೈಗೊಳ್ಳದಂತೆ ಅಧಿಕಾರಿಗಳು ಗಮನಹರಿಸಲು ಸೂಚಿಸಿದರು.

ಜಿಲ್ಲೆಯಾದ್ಯಂತ ಇರುವ ಪುರಸಭೆ ನಗರಸಭೆ, ಪಟ್ಟಣ ಪಂಚಾಯತಿ ವ್ಯಾಪ್ತಿಯ ಪೌರಕಾರ್ಮಿಕರಿಗೆ ವಸತಿ ಮತ್ತು ನಿವೇಶನ ಒದಗಿಸುವ ಬಗ್ಗೆ ಹಾಗೂ ಗ್ರಾಮಾಂತರ ಭಾಗದಲ್ಲಿ ಕೆಲಸ ನಿರ್ವಹಿಸುವ ಗ್ರಾಮ ಪಂಚಾಯಿತಿ ಸ್ವಚ್ಛತಾಗಾರರಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಒದಗಿಸಿ ಕೊಡುವಂತೆ ಸೂಚಿಸಿದರು.

ಮೈಸೂರು ಮಹಾನಗರ ಪಾಲಿಕೆಯಲ್ಲಿ ಶೇಕಡ 20ರಷ್ಟು ಅನುದಾನವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲು ಸೂಚಿಸಿದ ಜಿಲ್ಲಾಧಿಕಾರಿಗಳು ನಿತ್ಯ ಜೀವನದಲ್ಲಿ ಪೌರಕಾರ್ಮಿಕರು ಹಾಗೂ ಸ್ವಚ್ಛತಾಗಾರರ ಪಾತ್ರ ಬಹುಮುಖ್ಯವಾಗಿರುವುದರಿಂದ ಅವರಿಗೆ ವಿಶೇಷ ಗೌರವ ನೀಡಿ ಕಾಲಕಾಲಕ್ಕೆ ದೊರೆಯುವ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯ ವಿವಿಧ ಭಾಗಗಳಲ್ಲಿ ವಸತಿರಹಿತ ಪೌರಕಾರ್ಮಿಕರಿಗೆ ಹಾಗೂ ಸ್ವಚ್ಛತಾಗಾರರಿಗೆ ನಿವೇಶನಕ್ಕಾಗಿ ಜಮೀನನ್ನು ಗುರುತಿಸಿದ್ದು ಆದಷ್ಟು ಬೇಗ ನಿವೇಶನ ನೀಡಲು ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಹಂಚಿ ವಸತಿ ಸೌಲಭ್ಯ ಕಲ್ಪಿಸುವಲ್ಲಿ ಕ್ರಮವಹಿಸಬೇಕೆಂದು  ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್, ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago