ಮೈಸೂರು

ಮೈಸೂರು: ನಿಯಮ ಉಲ್ಲಂಘನೆಗೆ ದಂಡ ಶುಲ್ಕ ನಿಗಧಿ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕರು ಪ್ರತಿನಿತ್ಯ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ಪೌರಕಾರ್ಮಿಕರಿಗೆ ನೀಡುವುದು . ಇಲ್ಲವಾದಲ್ಲಿ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಅಧಿಸೂಚನೆಯoತೆ ದಂಡ ಶುಲ್ಕ ವಿಧಿಸಲಾಗುತ್ತದೆ.

ಸಾರ್ವಜನಿಕ ರಸ್ತೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಆಟದ ಮೈದಾನ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು, ಸ್ವಚ್ಛತೆ ಕಾಪಾಡಲು ವಿಫಲವಾದಲ್ಲಿ ರೂ.500 (ಮೊದಲ ಬಾರಿ) 1000 ರೂ. (ಪುನರಾವರ್ತಿ) ದಂಡ, ತ್ಯಾಜ್ಯವನ್ನು ಮೂಲದಲ್ಲಿಯೇ ಹಸಿಕಸ ಹಾಗೂ ಒಣಕಸ, ಕೈತೋಟದ ತ್ಯಾಜ್ಯ, ವೈದ್ಯಕೀಯ ತ್ಯಾಜ್ಯ, ವಿಷಕಾರಿ ತ್ಯಾಜ್ಯ ಹಾಗೂ ಇತರೆ ತ್ಯಾಜ್ಯವನ್ನು ಬೇರ್ಪಡಿಸಿ ತ್ಯಾಜ್ಯ ಸಂಗ್ರಹಕಾರರಿಗೆ ನೀಡದಿದ್ದಲ್ಲಿ ನಿವಾಸಿಗಳಿಗೆ- ರೂ.200, ವಾಣಿಜ್ಯ ಉದ್ದಿಮೆದಾರರಿಗೆ-ರೂ.500(ಮೊದಲ ಬಾರಿ), ನಿವಾಸಿಗಳಿಗೆ-ರೂ.500, ವಾಣಿಜ್ಯ ಉದ್ದಿಮೆದಾರರಿಗೆ ರೂ.1000(ಪುನರಾವರ್ತಿ) ದಂಡ, ಎಲ್ಲಾ ರೀತಿಯ ಚರಂಡಿಗಳಲ್ಲಿ ತ್ಯಾಜ್ಯ ಬಿಸಾಡುವವರಿಗೆ ರೂ.500 (ಮೊದಲ ಬಾರಿ) ರೂ.1000(ಪುನರಾವರ್ತಿ) ದಂಡ, ತ್ಯಾಜ್ಯ ಸುಡುವವರಿಗೆ 1. ರಸ್ತೆಬದಿಯಲ್ಲಿ ಎಲೆ ತ್ಯಾಜ್ಯ ಸುಡುವವರಿಗೆ ರೂ.200, 2.ಪ್ಲಾಸ್ಟಿಕ್ ವಸ್ತುಗಳನ್ನು ಮತ್ತು ಒಣತ್ಯಾಜ್ಯ ಸುಡುವವರಿಗೆ-ರೂ.500, 3.ಇ- ತ್ಯಾಜ್ಯ ಸುಡುವವರಿಗೆ ರೂ.1000(ಮೊದಲ ಬಾರಿ), ಕ್ರಮವಾಗಿ ಪುನರಾವರ್ತಿಗೆ ರೂ 500, 1000, 5000 ದಂಡ, ಭಾರಿ ತ್ಯಾಜ್ಯ ಜನಕರು(Bulk Waste Generator)ಗಳಾದ ಹಾಸ್ಟೆಲ್, ಹೊಟೇಲ್ ಅಥವಾ ರೆಸ್ಟೋರೆಂಟ್, ವಿದ್ಯಾಸಂಸ್ಥೆಗಳು, ಕಲ್ಯಾಣ ಮಂಟಪಗಳು, ಮಾಲ್‌ಗಳು, ವಾಣಿಜ್ಯ ಕಟ್ಟಡಗಳು, ಕೋಚಿಂಗ್ ಸೆಂಟರ್, ಸರ್ಕಾರಿ ಕಚೇರಿಗಳು, ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ, ವಸ್ತು ಪ್ರದರ್ಶನ ಇತ್ಯಾದಿ ಸ್ಥಳಗಳಲ್ಲಿ ತ್ಯಾಜ್ಯವನ್ನು ಮೂಲದಲ್ಲೇ ಪ್ರತ್ಯೇಕಿಸಿ ಪ್ರತ್ಯೇಕ ಸ್ಥಳದಲ್ಲಿ ಜೈವಿಕ ಅಥವಾ ವೈಜ್ಞಾನಿಕವಾಗಿ ಸಂಸ್ಕರಿಸದಿದ್ದಲ್ಲಿ ರೂ.20,000(ಮೊದಲ ಬಾರಿ) ರೂ.50,000 (ಪುನರವರ್ತಿ) ದಂಡ ಹಾಗೂ ಸಾರ್ವಜನಿಕರು ಕಟ್ಟಡ ಭಗ್ನಾವಶೇಷ ತ್ಯಾಜ್ಯವನ್ನು ನಿಗಧಿತ ಜಾಗದಲ್ಲಿ ವಿಲೇವಾರಿ ಮಾಡದಿದ್ದಲ್ಲಿ ರೂ.5000 (ಮೊದಲ ಬಾರಿ) ರೂ.10000(ಪುನರವರ್ತಿ) ದಂಡವನ್ನು ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರಾದ ಮಧು ಎನ್.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

36 mins ago

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

55 mins ago

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

3 hours ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

3 hours ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

3 hours ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

16 hours ago