ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕರು ಪ್ರತಿನಿತ್ಯ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ಪೌರಕಾರ್ಮಿಕರಿಗೆ ನೀಡುವುದು . ಇಲ್ಲವಾದಲ್ಲಿ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಅಧಿಸೂಚನೆಯoತೆ ದಂಡ ಶುಲ್ಕ ವಿಧಿಸಲಾಗುತ್ತದೆ.
ಸಾರ್ವಜನಿಕ ರಸ್ತೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಆಟದ ಮೈದಾನ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು, ಸ್ವಚ್ಛತೆ ಕಾಪಾಡಲು ವಿಫಲವಾದಲ್ಲಿ ರೂ.500 (ಮೊದಲ ಬಾರಿ) 1000 ರೂ. (ಪುನರಾವರ್ತಿ) ದಂಡ, ತ್ಯಾಜ್ಯವನ್ನು ಮೂಲದಲ್ಲಿಯೇ ಹಸಿಕಸ ಹಾಗೂ ಒಣಕಸ, ಕೈತೋಟದ ತ್ಯಾಜ್ಯ, ವೈದ್ಯಕೀಯ ತ್ಯಾಜ್ಯ, ವಿಷಕಾರಿ ತ್ಯಾಜ್ಯ ಹಾಗೂ ಇತರೆ ತ್ಯಾಜ್ಯವನ್ನು ಬೇರ್ಪಡಿಸಿ ತ್ಯಾಜ್ಯ ಸಂಗ್ರಹಕಾರರಿಗೆ ನೀಡದಿದ್ದಲ್ಲಿ ನಿವಾಸಿಗಳಿಗೆ- ರೂ.200, ವಾಣಿಜ್ಯ ಉದ್ದಿಮೆದಾರರಿಗೆ-ರೂ.500(ಮೊದಲ ಬಾರಿ), ನಿವಾಸಿಗಳಿಗೆ-ರೂ.500, ವಾಣಿಜ್ಯ ಉದ್ದಿಮೆದಾರರಿಗೆ ರೂ.1000(ಪುನರಾವರ್ತಿ) ದಂಡ, ಎಲ್ಲಾ ರೀತಿಯ ಚರಂಡಿಗಳಲ್ಲಿ ತ್ಯಾಜ್ಯ ಬಿಸಾಡುವವರಿಗೆ ರೂ.500 (ಮೊದಲ ಬಾರಿ) ರೂ.1000(ಪುನರಾವರ್ತಿ) ದಂಡ, ತ್ಯಾಜ್ಯ ಸುಡುವವರಿಗೆ 1. ರಸ್ತೆಬದಿಯಲ್ಲಿ ಎಲೆ ತ್ಯಾಜ್ಯ ಸುಡುವವರಿಗೆ ರೂ.200, 2.ಪ್ಲಾಸ್ಟಿಕ್ ವಸ್ತುಗಳನ್ನು ಮತ್ತು ಒಣತ್ಯಾಜ್ಯ ಸುಡುವವರಿಗೆ-ರೂ.500, 3.ಇ- ತ್ಯಾಜ್ಯ ಸುಡುವವರಿಗೆ ರೂ.1000(ಮೊದಲ ಬಾರಿ), ಕ್ರಮವಾಗಿ ಪುನರಾವರ್ತಿಗೆ ರೂ 500, 1000, 5000 ದಂಡ, ಭಾರಿ ತ್ಯಾಜ್ಯ ಜನಕರು(Bulk Waste Generator)ಗಳಾದ ಹಾಸ್ಟೆಲ್, ಹೊಟೇಲ್ ಅಥವಾ ರೆಸ್ಟೋರೆಂಟ್, ವಿದ್ಯಾಸಂಸ್ಥೆಗಳು, ಕಲ್ಯಾಣ ಮಂಟಪಗಳು, ಮಾಲ್ಗಳು, ವಾಣಿಜ್ಯ ಕಟ್ಟಡಗಳು, ಕೋಚಿಂಗ್ ಸೆಂಟರ್, ಸರ್ಕಾರಿ ಕಚೇರಿಗಳು, ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ, ವಸ್ತು ಪ್ರದರ್ಶನ ಇತ್ಯಾದಿ ಸ್ಥಳಗಳಲ್ಲಿ ತ್ಯಾಜ್ಯವನ್ನು ಮೂಲದಲ್ಲೇ ಪ್ರತ್ಯೇಕಿಸಿ ಪ್ರತ್ಯೇಕ ಸ್ಥಳದಲ್ಲಿ ಜೈವಿಕ ಅಥವಾ ವೈಜ್ಞಾನಿಕವಾಗಿ ಸಂಸ್ಕರಿಸದಿದ್ದಲ್ಲಿ ರೂ.20,000(ಮೊದಲ ಬಾರಿ) ರೂ.50,000 (ಪುನರವರ್ತಿ) ದಂಡ ಹಾಗೂ ಸಾರ್ವಜನಿಕರು ಕಟ್ಟಡ ಭಗ್ನಾವಶೇಷ ತ್ಯಾಜ್ಯವನ್ನು ನಿಗಧಿತ ಜಾಗದಲ್ಲಿ ವಿಲೇವಾರಿ ಮಾಡದಿದ್ದಲ್ಲಿ ರೂ.5000 (ಮೊದಲ ಬಾರಿ) ರೂ.10000(ಪುನರವರ್ತಿ) ದಂಡವನ್ನು ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರಾದ ಮಧು ಎನ್.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…