ಮೈಸೂರು

ಮೈಸೂರು: ನಿಯಮ ಉಲ್ಲಂಘನೆಗೆ ದಂಡ ಶುಲ್ಕ ನಿಗಧಿ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕರು ಪ್ರತಿನಿತ್ಯ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ಪೌರಕಾರ್ಮಿಕರಿಗೆ ನೀಡುವುದು . ಇಲ್ಲವಾದಲ್ಲಿ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಅಧಿಸೂಚನೆಯoತೆ ದಂಡ ಶುಲ್ಕ ವಿಧಿಸಲಾಗುತ್ತದೆ.

ಸಾರ್ವಜನಿಕ ರಸ್ತೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಆಟದ ಮೈದಾನ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು, ಸ್ವಚ್ಛತೆ ಕಾಪಾಡಲು ವಿಫಲವಾದಲ್ಲಿ ರೂ.500 (ಮೊದಲ ಬಾರಿ) 1000 ರೂ. (ಪುನರಾವರ್ತಿ) ದಂಡ, ತ್ಯಾಜ್ಯವನ್ನು ಮೂಲದಲ್ಲಿಯೇ ಹಸಿಕಸ ಹಾಗೂ ಒಣಕಸ, ಕೈತೋಟದ ತ್ಯಾಜ್ಯ, ವೈದ್ಯಕೀಯ ತ್ಯಾಜ್ಯ, ವಿಷಕಾರಿ ತ್ಯಾಜ್ಯ ಹಾಗೂ ಇತರೆ ತ್ಯಾಜ್ಯವನ್ನು ಬೇರ್ಪಡಿಸಿ ತ್ಯಾಜ್ಯ ಸಂಗ್ರಹಕಾರರಿಗೆ ನೀಡದಿದ್ದಲ್ಲಿ ನಿವಾಸಿಗಳಿಗೆ- ರೂ.200, ವಾಣಿಜ್ಯ ಉದ್ದಿಮೆದಾರರಿಗೆ-ರೂ.500(ಮೊದಲ ಬಾರಿ), ನಿವಾಸಿಗಳಿಗೆ-ರೂ.500, ವಾಣಿಜ್ಯ ಉದ್ದಿಮೆದಾರರಿಗೆ ರೂ.1000(ಪುನರಾವರ್ತಿ) ದಂಡ, ಎಲ್ಲಾ ರೀತಿಯ ಚರಂಡಿಗಳಲ್ಲಿ ತ್ಯಾಜ್ಯ ಬಿಸಾಡುವವರಿಗೆ ರೂ.500 (ಮೊದಲ ಬಾರಿ) ರೂ.1000(ಪುನರಾವರ್ತಿ) ದಂಡ, ತ್ಯಾಜ್ಯ ಸುಡುವವರಿಗೆ 1. ರಸ್ತೆಬದಿಯಲ್ಲಿ ಎಲೆ ತ್ಯಾಜ್ಯ ಸುಡುವವರಿಗೆ ರೂ.200, 2.ಪ್ಲಾಸ್ಟಿಕ್ ವಸ್ತುಗಳನ್ನು ಮತ್ತು ಒಣತ್ಯಾಜ್ಯ ಸುಡುವವರಿಗೆ-ರೂ.500, 3.ಇ- ತ್ಯಾಜ್ಯ ಸುಡುವವರಿಗೆ ರೂ.1000(ಮೊದಲ ಬಾರಿ), ಕ್ರಮವಾಗಿ ಪುನರಾವರ್ತಿಗೆ ರೂ 500, 1000, 5000 ದಂಡ, ಭಾರಿ ತ್ಯಾಜ್ಯ ಜನಕರು(Bulk Waste Generator)ಗಳಾದ ಹಾಸ್ಟೆಲ್, ಹೊಟೇಲ್ ಅಥವಾ ರೆಸ್ಟೋರೆಂಟ್, ವಿದ್ಯಾಸಂಸ್ಥೆಗಳು, ಕಲ್ಯಾಣ ಮಂಟಪಗಳು, ಮಾಲ್‌ಗಳು, ವಾಣಿಜ್ಯ ಕಟ್ಟಡಗಳು, ಕೋಚಿಂಗ್ ಸೆಂಟರ್, ಸರ್ಕಾರಿ ಕಚೇರಿಗಳು, ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ, ವಸ್ತು ಪ್ರದರ್ಶನ ಇತ್ಯಾದಿ ಸ್ಥಳಗಳಲ್ಲಿ ತ್ಯಾಜ್ಯವನ್ನು ಮೂಲದಲ್ಲೇ ಪ್ರತ್ಯೇಕಿಸಿ ಪ್ರತ್ಯೇಕ ಸ್ಥಳದಲ್ಲಿ ಜೈವಿಕ ಅಥವಾ ವೈಜ್ಞಾನಿಕವಾಗಿ ಸಂಸ್ಕರಿಸದಿದ್ದಲ್ಲಿ ರೂ.20,000(ಮೊದಲ ಬಾರಿ) ರೂ.50,000 (ಪುನರವರ್ತಿ) ದಂಡ ಹಾಗೂ ಸಾರ್ವಜನಿಕರು ಕಟ್ಟಡ ಭಗ್ನಾವಶೇಷ ತ್ಯಾಜ್ಯವನ್ನು ನಿಗಧಿತ ಜಾಗದಲ್ಲಿ ವಿಲೇವಾರಿ ಮಾಡದಿದ್ದಲ್ಲಿ ರೂ.5000 (ಮೊದಲ ಬಾರಿ) ರೂ.10000(ಪುನರವರ್ತಿ) ದಂಡವನ್ನು ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರಾದ ಮಧು ಎನ್.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

22 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

22 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

22 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

22 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

22 hours ago