ಮೈಸೂರು

ಮೈಸೂರು | 21 ರಂದು ಪಲ್ಸ್ ಪೋಲಿಯೋ ಅಭಿಯಾನ

ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಕರೆ ನೀಡಿದರು.

ಶುಕ್ರವಾರ ಜಿಲ್ಲಾ ಪಂಚಾಯತ್ ಡಿ.ದೇವರಾಜ ಅರಸು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಬೂತ್ ಮಟ್ಟದಲ್ಲಿ ಲಸಿಕೆ ನೀಡಲಾಗುತ್ತದೆ. ಡಿಸೆಂಬರ್ 22 ರಿಂದ ಡಿಸೆಂಬರ್ 24 ರವರೆಗೆ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಡಿಸೆಂಬರ್ 21 ರಿಂದ 24 ರವರೆಗೆ 4 ದಿನಗಳು ಸಂಚಾರ ಕೇಂದ್ರಗಳು ಹಾಗೂ ಹೆಚ್ಚಿನ ಅಪಾಯ ಪ್ರದೇಶಗಳಲ್ಲಿ ವಿಶೇಷ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಡಿಸೆಂಬರ್ 21 ಕ್ಕೆ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರತಿಯೊಂದು ಮಗುವಿಗೂ ತಪ್ಪಿದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ. ಪಲ್ಸ್ ಪೋಲಿಯೋ ಲಸಿಕೆ ನೀಡಲು ಅಗತ್ಯವಿರುವ ಸಿಬ್ಬಂದಿಗಳಿಗೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಿ. ರೂಟ್ ಮ್ಯಾಪ್ ಗಳನ್ನು ಸಮರ್ಪಕವಾಗಿ ಮಾಡಿಕೊಳ್ಳಿ ಎಂದು ಸೂಚನೆ ನೀಡಿದರು.

ಇದನ್ನು ಓದಿ: ವೈದ್ಯ, ನರ್ಸ್‌ ಹುದ್ದೆ ಭರ್ತಿಗೆ ಒಂದು ತಿಂಗಳೊಳಗೆ ಕ್ರಮ : ಆರೋಗ್ಯ ಸಚಿವ ಗುಂಡೂರಾವ್‌

ಡಾ.ಸುದೀರ್ ನಾಯಕ್ ಮಾತನಾಡಿ, ಕಳೆದ 14 ವರ್ಷಗಳಿಂದ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ಕಂಡು ಬಂದಿಲ್ಲ. ಕರ್ನಾಟಕದಲ್ಲಿ 2007 ರಲ್ಲಿ ಕೊನೆಯದಾಗಿ ಒಂದು ಪೋಲಿಯೋ ಪ್ರಕರಣ ಕಂಡುಬಂದಿತ್ತು. ನಂತರ ಯಾವುದೇ ಪೋಲಿಯೋ ಪ್ರಕರಣಗಳು ಕಂಡು ಬಂದಿಲ್ಲ. ಪೋಲಿಯೋ ಲಸಿಕೆ ಹಾಕಿಸಿದ ಮಗುವಿನ ಬೆರಳಿಗೆ ಇಂಕ್ ಹಾಕಲಾಗುವುದು. ಇದರಿಂದ ಯಾರಿಗೆ ಲಸಿಕೆ ಹಾಕಲಾಗಿದೆ ಎಂಬುದನ್ನು ಹಾಗೂ ಎರಡೆರಡು ಬಾರಿ ಲಸಿಕೆ ಹಾಕಿಸುವುದನ್ನು ತಪ್ಪಿಸಬಹುದಾಗಿದೆ ಎಂದು ತಿಳಿಸಿದರು.

ವಲಸೆ ಹೋಗಿರುವ ಹಾಗೂ ವಲಸೆ ಬಂದಿರುವ ಕುಟುಂಬದ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ. ಜಿಲ್ಲೆಯಲ್ಲಿ 5 ವರ್ಷದೊಳಗಿನ 2,22,084 ಮಕ್ಕಳು ಇದ್ದಾರೆ. ಇವರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. 1648 ಬೂತ್ ಗಳಲ್ಲಿ ಲಸಿಕೆ ನೀಡಲಾಗುತ್ತದೆ. 50 ಮೊಬೈಲ್ ಟಿಮ್ ಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ ಕುಮಾರ್ ಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜು, ಆರ್.ಸಿ.ಹೆಚ್ ಅಧಿಕಾರಿ ಮಹಮ್ಮದ್ ಸಿರಾಜ್ ಅವರು ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago