ಮೈಸೂರು : ನಗರದ ಧ್ವನ್ಯಾಲೋಕದಲ್ಲಿ ಆಗಸ್ಟ್ 9ರಂದು ಬೆಳಿಗ್ಗೆ 11 ಗಂಟೆಗೆ ‘ಅದ್ಭುತ ರಾಮಾಯಣ’ದ ತೊಗಲುಗೊಂಬೆಯಾಟದ ಮೊದಲ ಪ್ರದರ್ಶನ ಏರ್ಪಡಿಸಲಾಗಿದೆ.
ಧಾರವಾಡದ ಪಫೆಟ್ ಹೌಸ್ ಹಾಗೂ ನಗರದ ಸಂಚಲನ ತಂಡದ ಸಹಯೋಗದೊಂದಿಗೆ ಆಯೋಜಿಸಿರುವ ಈ ಪ್ರದರ್ಶನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಚಾಲನೆ ನೀಡುವರು. ಮೈಸೂರು ರಂಗಾಯಣದ ಉಪನಿರ್ದೇಶಕಿ ನಿರ್ಮಲಾ ಮಠಪತಿ ಹಾಗೂ ಧ್ವನ್ಯಾಲೋಕದ ನಿರ್ದೇಶಕಿ ಜಯಶ್ರೀ ಸಂಜಯ್ ಹಾಜರಿರುವರು.
ಕಂದಗಲ್ ಹನುಮಂತ ರಾಯರ ಅದ್ಭುತ ರಾಮಾಯಣ ಅರ್ಥಾತ್ ಅಗ್ನಿಕಮಲ ನಾಟಕ ಕೃತಿಯ ರಂಗ ರೂಪ ಡಾ.ಪ್ರಕಾಶ ಗರುಡ ಅವರದು. ಸಂಗೀತ ರಾಘವ ಕಮ್ಮಾರ, ಗೊಂಬೆ ವಿನ್ಯಾಸ ನಿಮ್ಮಲಕುಂಟದ ಶ್ರೀನಿವಾಸಲು ಮತ್ತು ಕುಟುಂಬ. ನಿರ್ದೇಶನ ರಜನಿ ಗರುಡ. ಉಚಿತ ಪ್ರವೇಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬರಬೇಕೆಂದು ಸಂಚಲನ ತಂಡದ ದೀಪಕ್ ಪ್ರಕಟಣೆಯಲ್ಲಿ ಕೋರಿದ್ದಾರೆ.





