ಮೈಸೂರು : ನಗರದ ಧ್ವನ್ಯಾಲೋಕದಲ್ಲಿ ಆಗಸ್ಟ್ 9ರಂದು ಬೆಳಿಗ್ಗೆ 11 ಗಂಟೆಗೆ ‘ಅದ್ಭುತ ರಾಮಾಯಣ’ದ ತೊಗಲುಗೊಂಬೆಯಾಟದ ಮೊದಲ ಪ್ರದರ್ಶನ ಏರ್ಪಡಿಸಲಾಗಿದೆ.
ಧಾರವಾಡದ ಪಫೆಟ್ ಹೌಸ್ ಹಾಗೂ ನಗರದ ಸಂಚಲನ ತಂಡದ ಸಹಯೋಗದೊಂದಿಗೆ ಆಯೋಜಿಸಿರುವ ಈ ಪ್ರದರ್ಶನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಚಾಲನೆ ನೀಡುವರು. ಮೈಸೂರು ರಂಗಾಯಣದ ಉಪನಿರ್ದೇಶಕಿ ನಿರ್ಮಲಾ ಮಠಪತಿ ಹಾಗೂ ಧ್ವನ್ಯಾಲೋಕದ ನಿರ್ದೇಶಕಿ ಜಯಶ್ರೀ ಸಂಜಯ್ ಹಾಜರಿರುವರು.
ಕಂದಗಲ್ ಹನುಮಂತ ರಾಯರ ಅದ್ಭುತ ರಾಮಾಯಣ ಅರ್ಥಾತ್ ಅಗ್ನಿಕಮಲ ನಾಟಕ ಕೃತಿಯ ರಂಗ ರೂಪ ಡಾ.ಪ್ರಕಾಶ ಗರುಡ ಅವರದು. ಸಂಗೀತ ರಾಘವ ಕಮ್ಮಾರ, ಗೊಂಬೆ ವಿನ್ಯಾಸ ನಿಮ್ಮಲಕುಂಟದ ಶ್ರೀನಿವಾಸಲು ಮತ್ತು ಕುಟುಂಬ. ನಿರ್ದೇಶನ ರಜನಿ ಗರುಡ. ಉಚಿತ ಪ್ರವೇಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬರಬೇಕೆಂದು ಸಂಚಲನ ತಂಡದ ದೀಪಕ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…