ಮೈಸೂರು : ನಗರದ ಧ್ವನ್ಯಾಲೋಕದಲ್ಲಿ ಆಗಸ್ಟ್ 9ರಂದು ಬೆಳಿಗ್ಗೆ 11 ಗಂಟೆಗೆ ‘ಅದ್ಭುತ ರಾಮಾಯಣ’ದ ತೊಗಲುಗೊಂಬೆಯಾಟದ ಮೊದಲ ಪ್ರದರ್ಶನ ಏರ್ಪಡಿಸಲಾಗಿದೆ.
ಧಾರವಾಡದ ಪಫೆಟ್ ಹೌಸ್ ಹಾಗೂ ನಗರದ ಸಂಚಲನ ತಂಡದ ಸಹಯೋಗದೊಂದಿಗೆ ಆಯೋಜಿಸಿರುವ ಈ ಪ್ರದರ್ಶನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಚಾಲನೆ ನೀಡುವರು. ಮೈಸೂರು ರಂಗಾಯಣದ ಉಪನಿರ್ದೇಶಕಿ ನಿರ್ಮಲಾ ಮಠಪತಿ ಹಾಗೂ ಧ್ವನ್ಯಾಲೋಕದ ನಿರ್ದೇಶಕಿ ಜಯಶ್ರೀ ಸಂಜಯ್ ಹಾಜರಿರುವರು.
ಕಂದಗಲ್ ಹನುಮಂತ ರಾಯರ ಅದ್ಭುತ ರಾಮಾಯಣ ಅರ್ಥಾತ್ ಅಗ್ನಿಕಮಲ ನಾಟಕ ಕೃತಿಯ ರಂಗ ರೂಪ ಡಾ.ಪ್ರಕಾಶ ಗರುಡ ಅವರದು. ಸಂಗೀತ ರಾಘವ ಕಮ್ಮಾರ, ಗೊಂಬೆ ವಿನ್ಯಾಸ ನಿಮ್ಮಲಕುಂಟದ ಶ್ರೀನಿವಾಸಲು ಮತ್ತು ಕುಟುಂಬ. ನಿರ್ದೇಶನ ರಜನಿ ಗರುಡ. ಉಚಿತ ಪ್ರವೇಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬರಬೇಕೆಂದು ಸಂಚಲನ ತಂಡದ ದೀಪಕ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…