ಮೈಸೂರು : ನಗರದ ಧ್ವನ್ಯಾಲೋಕದಲ್ಲಿ ಆಗಸ್ಟ್ 9ರಂದು ಬೆಳಿಗ್ಗೆ 11 ಗಂಟೆಗೆ ‘ಅದ್ಭುತ ರಾಮಾಯಣ’ದ ತೊಗಲುಗೊಂಬೆಯಾಟದ ಮೊದಲ ಪ್ರದರ್ಶನ ಏರ್ಪಡಿಸಲಾಗಿದೆ.
ಧಾರವಾಡದ ಪಫೆಟ್ ಹೌಸ್ ಹಾಗೂ ನಗರದ ಸಂಚಲನ ತಂಡದ ಸಹಯೋಗದೊಂದಿಗೆ ಆಯೋಜಿಸಿರುವ ಈ ಪ್ರದರ್ಶನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಚಾಲನೆ ನೀಡುವರು. ಮೈಸೂರು ರಂಗಾಯಣದ ಉಪನಿರ್ದೇಶಕಿ ನಿರ್ಮಲಾ ಮಠಪತಿ ಹಾಗೂ ಧ್ವನ್ಯಾಲೋಕದ ನಿರ್ದೇಶಕಿ ಜಯಶ್ರೀ ಸಂಜಯ್ ಹಾಜರಿರುವರು.
ಕಂದಗಲ್ ಹನುಮಂತ ರಾಯರ ಅದ್ಭುತ ರಾಮಾಯಣ ಅರ್ಥಾತ್ ಅಗ್ನಿಕಮಲ ನಾಟಕ ಕೃತಿಯ ರಂಗ ರೂಪ ಡಾ.ಪ್ರಕಾಶ ಗರುಡ ಅವರದು. ಸಂಗೀತ ರಾಘವ ಕಮ್ಮಾರ, ಗೊಂಬೆ ವಿನ್ಯಾಸ ನಿಮ್ಮಲಕುಂಟದ ಶ್ರೀನಿವಾಸಲು ಮತ್ತು ಕುಟುಂಬ. ನಿರ್ದೇಶನ ರಜನಿ ಗರುಡ. ಉಚಿತ ಪ್ರವೇಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬರಬೇಕೆಂದು ಸಂಚಲನ ತಂಡದ ದೀಪಕ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…