ಮೈಸೂರು

ವಿಶ್ವದರ್ಜೆಗೆ ಮೈಸೂರು ರೈಲು ನಿಲ್ದಾಣ

395.73 ಕೋಟಿ ರೂ. ವೆಚ್ಚ; 3 ಹೊಸ ಫ್ಲಾಟ್ ಫಾರಂ, 4 ಪಿಟ್ ಲೈನ್

 

ಮೈಸೂರು: ಮೈಸೂರು ರೈಲು ನಿಲ್ದಾಣವನ್ನು 395.73 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಹೇಳಿದ್ದಾರೆ.

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸ್ಟೇಷನ್ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಈ ಅಭಿವೃದ್ಧಿಯು ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲಿದೆ. ಹೊಸ ರೈಲುಗಳ ಚಾಲನೆ, ಹಾಲಿ ರೈಲುಗಳ ಸೇವೆ ಹೆಚ್ಚಿಸುವುದು ಹಾಗೂ ಹೊಸ ತಾಣಗಳಿಗೆ ಸಂಪರ್ಕ ಕಲ್ಪಿಸುವಂತೆ ಯೋಜನೆ ರೂಪಿಸಲಾಗಿದೆ’ ಎಂದರು.

ಈ ಯೋಜನೆಯಡಿಯಲ್ಲಿ ಮೂರು ಹೊಸ ಪ್ಲಾಟ್ ಫಾರಂಗಳು, ನಾಲ್ಕು ಪಿಟ್ ಲೈನ್‌ಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಸ್ಟೇಬ್ಲಿಂಗ್ ಲೈನ್‌ಗಳನ್ನು ನಿರ್ಮಿಸಲಾಗುವುದು.

ಮೈಸೂರು ರೈಲು ನಿಲ್ದಾಣವು ಎನ್‌ಎಸ್‌ಜಿ-2 ವರ್ಗಕ್ಕೆ ಸೇರಿದ ನಿಲ್ದಾಣವಾಗಿದ್ದು, ಒಟ್ಟು ಆರು ಪ್ಲಾಟ್ ಫಾರ್ಮ್ ಹೊಂದಿದೆ. ದ್ವಿ ಸಾಪ್ತಾಹಿಕ, ತ್ರೈ ಸಾಪ್ತಾಹಿಕ ಮತ್ತು ಸಾಪ್ತಾಹಿಕ ಸೇವೆಗಳನ್ನು ಒಳಗೊಂಡಂತೆ 106 ರೈಲುಗಳು ಸಂಚರಿಸುತ್ತಿವೆ. ಇವು ಮೈಸೂರು ನಗರಕ್ಕೆ ಹೊಸದಿಲ್ಲಿ, ಪಟನಾ, ಮುಂಬಯಿ, ಕೂಚಿಕುಡಿ, ಚೆನ್ನೈ, ತಿರುಪತಿ, ತಿರುವನಂತಪುರಂ ಸೇರಿದಂತೆ ರಾಜ್ಯದ ವಿವಿಧ ಭಾಗಗಳು, ದೇಶದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುತ್ತವೆ,” ಎಂದು ಮಾಹಿತಿ ನೀಡಿದರು.

“ನಿಲ್ದಾಣದಲ್ಲಿ ದಿನಕ್ಕೆ ಸರಾಸರಿ 60 ಸಾವಿರ ಪ್ರಯಾಣಿಕರ ಸಂಚಾರವಿದ್ದು, ನಿತ್ಯ ಸುಮಾರು 21-25 ಲಕ್ಷ ರೂ. ಆದಾಯ ಗಳಿಸುತ್ತದೆ. ಎಸ್ಕಲೇಟರ್‌ಗಳು, ಲಿಫ್ಟ್‌ಗಳು, ಅಂಡರ್‌ಪಾಸ್, ಪಾದಚಾರಿ ಮೇಲ್ಸೇತುವೆ, ವೈ-ಫೈ, ಕೋಚ್ ಸೂಚನಾ ಫಲಕಗಳು, ಸಾರ್ವಜನಿಕ ಘೋಷಣೆ ವ್ಯವಸ್ಥೆ, ಆಹಾರ ಮಳಿಗೆಗಳು, ನಿರೀಕ್ಷಣಾ ಮಂದಿರಗಳು, ಬ್ಯಾಟರಿ ಚಾಲಿತ ವಾಹನಗಳು, ಎಟಿಎಂಗಳಂತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ನಿಲ್ದಾಣವು ದಿವ್ಯಾಂಗ ಜನ ಸ್ನೇಹಿ ಕೂಡ ಆಗಿದೆ,” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೈ.ಸಿ. ರೇವಣ್ಣ ಹಾಗೂ ನಿವೃತ್ತ ರೈಲ್ವೆ ನೌಕರ ಎಚ್.ಎಸ್. ರಾಮಣ್ಣ ಅವರನ್ನು ಸನ್ಮಾನಿಸಲಾಯಿತು.

ಮುದಿತ್ ಮಿತ್ತಲ್ ಅವರು ವೇದಿಕೆ ಕಾರ್ಯಕ್ರಮದ ನಂತರ ಪರಂಪರೆ ಗ್ಯಾಲರಿ ಹಾಗೂ ಮೈಸೂರು ರೈಲು ಸಂಗ್ರಹಾಲಯಕ್ಕೆ ಭೇಟಿ ನೀಡಿದರು. ಲಲಿತಾ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕ ತಿಕ ಕಾರ್ಯಕ್ರಮ ನೀಡಿದರು.

ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್, ಜಡ್‌ಆರ್ ಯುಸಿಸಿ ಮತ್ತು ಡಿಆರ್ ಯುಸಿಸಿ ಸದಸ್ಯರು, ಶಾಖಾ ಅಧಿಕಾರಿಗಳು, ಲಲಿತಾ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ರೈಲ್ವೆ ಸಿಬ್ಬಂದಿ ಇದ್ದರು.

 

ಆಂದೋಲನ ಡೆಸ್ಕ್

Recent Posts

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

18 mins ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

35 mins ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

54 mins ago

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

2 hours ago

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

5 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

5 hours ago