ಮೈಸೂರು

ವಿಶ್ವದರ್ಜೆಗೆ ಮೈಸೂರು ರೈಲು ನಿಲ್ದಾಣ

395.73 ಕೋಟಿ ರೂ. ವೆಚ್ಚ; 3 ಹೊಸ ಫ್ಲಾಟ್ ಫಾರಂ, 4 ಪಿಟ್ ಲೈನ್

 

ಮೈಸೂರು: ಮೈಸೂರು ರೈಲು ನಿಲ್ದಾಣವನ್ನು 395.73 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಹೇಳಿದ್ದಾರೆ.

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸ್ಟೇಷನ್ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಈ ಅಭಿವೃದ್ಧಿಯು ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲಿದೆ. ಹೊಸ ರೈಲುಗಳ ಚಾಲನೆ, ಹಾಲಿ ರೈಲುಗಳ ಸೇವೆ ಹೆಚ್ಚಿಸುವುದು ಹಾಗೂ ಹೊಸ ತಾಣಗಳಿಗೆ ಸಂಪರ್ಕ ಕಲ್ಪಿಸುವಂತೆ ಯೋಜನೆ ರೂಪಿಸಲಾಗಿದೆ’ ಎಂದರು.

ಈ ಯೋಜನೆಯಡಿಯಲ್ಲಿ ಮೂರು ಹೊಸ ಪ್ಲಾಟ್ ಫಾರಂಗಳು, ನಾಲ್ಕು ಪಿಟ್ ಲೈನ್‌ಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಸ್ಟೇಬ್ಲಿಂಗ್ ಲೈನ್‌ಗಳನ್ನು ನಿರ್ಮಿಸಲಾಗುವುದು.

ಮೈಸೂರು ರೈಲು ನಿಲ್ದಾಣವು ಎನ್‌ಎಸ್‌ಜಿ-2 ವರ್ಗಕ್ಕೆ ಸೇರಿದ ನಿಲ್ದಾಣವಾಗಿದ್ದು, ಒಟ್ಟು ಆರು ಪ್ಲಾಟ್ ಫಾರ್ಮ್ ಹೊಂದಿದೆ. ದ್ವಿ ಸಾಪ್ತಾಹಿಕ, ತ್ರೈ ಸಾಪ್ತಾಹಿಕ ಮತ್ತು ಸಾಪ್ತಾಹಿಕ ಸೇವೆಗಳನ್ನು ಒಳಗೊಂಡಂತೆ 106 ರೈಲುಗಳು ಸಂಚರಿಸುತ್ತಿವೆ. ಇವು ಮೈಸೂರು ನಗರಕ್ಕೆ ಹೊಸದಿಲ್ಲಿ, ಪಟನಾ, ಮುಂಬಯಿ, ಕೂಚಿಕುಡಿ, ಚೆನ್ನೈ, ತಿರುಪತಿ, ತಿರುವನಂತಪುರಂ ಸೇರಿದಂತೆ ರಾಜ್ಯದ ವಿವಿಧ ಭಾಗಗಳು, ದೇಶದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುತ್ತವೆ,” ಎಂದು ಮಾಹಿತಿ ನೀಡಿದರು.

“ನಿಲ್ದಾಣದಲ್ಲಿ ದಿನಕ್ಕೆ ಸರಾಸರಿ 60 ಸಾವಿರ ಪ್ರಯಾಣಿಕರ ಸಂಚಾರವಿದ್ದು, ನಿತ್ಯ ಸುಮಾರು 21-25 ಲಕ್ಷ ರೂ. ಆದಾಯ ಗಳಿಸುತ್ತದೆ. ಎಸ್ಕಲೇಟರ್‌ಗಳು, ಲಿಫ್ಟ್‌ಗಳು, ಅಂಡರ್‌ಪಾಸ್, ಪಾದಚಾರಿ ಮೇಲ್ಸೇತುವೆ, ವೈ-ಫೈ, ಕೋಚ್ ಸೂಚನಾ ಫಲಕಗಳು, ಸಾರ್ವಜನಿಕ ಘೋಷಣೆ ವ್ಯವಸ್ಥೆ, ಆಹಾರ ಮಳಿಗೆಗಳು, ನಿರೀಕ್ಷಣಾ ಮಂದಿರಗಳು, ಬ್ಯಾಟರಿ ಚಾಲಿತ ವಾಹನಗಳು, ಎಟಿಎಂಗಳಂತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ನಿಲ್ದಾಣವು ದಿವ್ಯಾಂಗ ಜನ ಸ್ನೇಹಿ ಕೂಡ ಆಗಿದೆ,” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೈ.ಸಿ. ರೇವಣ್ಣ ಹಾಗೂ ನಿವೃತ್ತ ರೈಲ್ವೆ ನೌಕರ ಎಚ್.ಎಸ್. ರಾಮಣ್ಣ ಅವರನ್ನು ಸನ್ಮಾನಿಸಲಾಯಿತು.

ಮುದಿತ್ ಮಿತ್ತಲ್ ಅವರು ವೇದಿಕೆ ಕಾರ್ಯಕ್ರಮದ ನಂತರ ಪರಂಪರೆ ಗ್ಯಾಲರಿ ಹಾಗೂ ಮೈಸೂರು ರೈಲು ಸಂಗ್ರಹಾಲಯಕ್ಕೆ ಭೇಟಿ ನೀಡಿದರು. ಲಲಿತಾ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕ ತಿಕ ಕಾರ್ಯಕ್ರಮ ನೀಡಿದರು.

ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್, ಜಡ್‌ಆರ್ ಯುಸಿಸಿ ಮತ್ತು ಡಿಆರ್ ಯುಸಿಸಿ ಸದಸ್ಯರು, ಶಾಖಾ ಅಧಿಕಾರಿಗಳು, ಲಲಿತಾ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ರೈಲ್ವೆ ಸಿಬ್ಬಂದಿ ಇದ್ದರು.

 

ಆಂದೋಲನ ಡೆಸ್ಕ್

Recent Posts

ರಾಜ್ಯದ 2 ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಶುರು

ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ…

5 seconds ago

ಭವಾನಿಪುರದಲ್ಲಿ ಭಾರೀ ಭದ್ರತೆ ; ಮತ ಎಣಿಕೆಗೂ ಮುನ್ನ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದ ದೀದಿ

ಕೊಲ್ಕತ್ತಾ : ಪಶ್ಚಿಮ ಬಂಗಾಳ ಚುನಾವಣೆ 2026ರ ಫಲಿತಾಂಶ ಹಿನ್ನೆಲೆಯಲ್ಲಿ, ಮಮತಾ ಬ್ಯಾನರ್ಜಿ ಭವಾನಿಪುರದ ಮಾ ಬಾಗಲಮುಖಿ ದೇವಸ್ಥಾನದಲ್ಲಿ ನಿನ್ನೆ…

19 mins ago

ಪಂಚರಾಜ್ಯ ಚುನಾವಣೆ ಫಲಿತಾಂಶ ; ಮತ ಎಣಿಕೆಗೆ ಕ್ಷಣಗಣನೆ

ಬೆಂಗಳೂರು : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.…

28 mins ago

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

12 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

12 hours ago