ಮೈಸೂರು

ವಿಶ್ವದರ್ಜೆಗೆ ಮೈಸೂರು ರೈಲು ನಿಲ್ದಾಣ

395.73 ಕೋಟಿ ರೂ. ವೆಚ್ಚ; 3 ಹೊಸ ಫ್ಲಾಟ್ ಫಾರಂ, 4 ಪಿಟ್ ಲೈನ್

 

ಮೈಸೂರು: ಮೈಸೂರು ರೈಲು ನಿಲ್ದಾಣವನ್ನು 395.73 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಹೇಳಿದ್ದಾರೆ.

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸ್ಟೇಷನ್ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಈ ಅಭಿವೃದ್ಧಿಯು ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲಿದೆ. ಹೊಸ ರೈಲುಗಳ ಚಾಲನೆ, ಹಾಲಿ ರೈಲುಗಳ ಸೇವೆ ಹೆಚ್ಚಿಸುವುದು ಹಾಗೂ ಹೊಸ ತಾಣಗಳಿಗೆ ಸಂಪರ್ಕ ಕಲ್ಪಿಸುವಂತೆ ಯೋಜನೆ ರೂಪಿಸಲಾಗಿದೆ’ ಎಂದರು.

ಈ ಯೋಜನೆಯಡಿಯಲ್ಲಿ ಮೂರು ಹೊಸ ಪ್ಲಾಟ್ ಫಾರಂಗಳು, ನಾಲ್ಕು ಪಿಟ್ ಲೈನ್‌ಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಸ್ಟೇಬ್ಲಿಂಗ್ ಲೈನ್‌ಗಳನ್ನು ನಿರ್ಮಿಸಲಾಗುವುದು.

ಮೈಸೂರು ರೈಲು ನಿಲ್ದಾಣವು ಎನ್‌ಎಸ್‌ಜಿ-2 ವರ್ಗಕ್ಕೆ ಸೇರಿದ ನಿಲ್ದಾಣವಾಗಿದ್ದು, ಒಟ್ಟು ಆರು ಪ್ಲಾಟ್ ಫಾರ್ಮ್ ಹೊಂದಿದೆ. ದ್ವಿ ಸಾಪ್ತಾಹಿಕ, ತ್ರೈ ಸಾಪ್ತಾಹಿಕ ಮತ್ತು ಸಾಪ್ತಾಹಿಕ ಸೇವೆಗಳನ್ನು ಒಳಗೊಂಡಂತೆ 106 ರೈಲುಗಳು ಸಂಚರಿಸುತ್ತಿವೆ. ಇವು ಮೈಸೂರು ನಗರಕ್ಕೆ ಹೊಸದಿಲ್ಲಿ, ಪಟನಾ, ಮುಂಬಯಿ, ಕೂಚಿಕುಡಿ, ಚೆನ್ನೈ, ತಿರುಪತಿ, ತಿರುವನಂತಪುರಂ ಸೇರಿದಂತೆ ರಾಜ್ಯದ ವಿವಿಧ ಭಾಗಗಳು, ದೇಶದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುತ್ತವೆ,” ಎಂದು ಮಾಹಿತಿ ನೀಡಿದರು.

“ನಿಲ್ದಾಣದಲ್ಲಿ ದಿನಕ್ಕೆ ಸರಾಸರಿ 60 ಸಾವಿರ ಪ್ರಯಾಣಿಕರ ಸಂಚಾರವಿದ್ದು, ನಿತ್ಯ ಸುಮಾರು 21-25 ಲಕ್ಷ ರೂ. ಆದಾಯ ಗಳಿಸುತ್ತದೆ. ಎಸ್ಕಲೇಟರ್‌ಗಳು, ಲಿಫ್ಟ್‌ಗಳು, ಅಂಡರ್‌ಪಾಸ್, ಪಾದಚಾರಿ ಮೇಲ್ಸೇತುವೆ, ವೈ-ಫೈ, ಕೋಚ್ ಸೂಚನಾ ಫಲಕಗಳು, ಸಾರ್ವಜನಿಕ ಘೋಷಣೆ ವ್ಯವಸ್ಥೆ, ಆಹಾರ ಮಳಿಗೆಗಳು, ನಿರೀಕ್ಷಣಾ ಮಂದಿರಗಳು, ಬ್ಯಾಟರಿ ಚಾಲಿತ ವಾಹನಗಳು, ಎಟಿಎಂಗಳಂತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ನಿಲ್ದಾಣವು ದಿವ್ಯಾಂಗ ಜನ ಸ್ನೇಹಿ ಕೂಡ ಆಗಿದೆ,” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೈ.ಸಿ. ರೇವಣ್ಣ ಹಾಗೂ ನಿವೃತ್ತ ರೈಲ್ವೆ ನೌಕರ ಎಚ್.ಎಸ್. ರಾಮಣ್ಣ ಅವರನ್ನು ಸನ್ಮಾನಿಸಲಾಯಿತು.

ಮುದಿತ್ ಮಿತ್ತಲ್ ಅವರು ವೇದಿಕೆ ಕಾರ್ಯಕ್ರಮದ ನಂತರ ಪರಂಪರೆ ಗ್ಯಾಲರಿ ಹಾಗೂ ಮೈಸೂರು ರೈಲು ಸಂಗ್ರಹಾಲಯಕ್ಕೆ ಭೇಟಿ ನೀಡಿದರು. ಲಲಿತಾ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕ ತಿಕ ಕಾರ್ಯಕ್ರಮ ನೀಡಿದರು.

ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್, ಜಡ್‌ಆರ್ ಯುಸಿಸಿ ಮತ್ತು ಡಿಆರ್ ಯುಸಿಸಿ ಸದಸ್ಯರು, ಶಾಖಾ ಅಧಿಕಾರಿಗಳು, ಲಲಿತಾ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ರೈಲ್ವೆ ಸಿಬ್ಬಂದಿ ಇದ್ದರು.

 

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

5 mins ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

31 mins ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

16 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

19 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

20 hours ago