ಮೈಸೂರು

ವಿಶ್ವದರ್ಜೆಗೆ ಮೈಸೂರು ರೈಲು ನಿಲ್ದಾಣ

395.73 ಕೋಟಿ ರೂ. ವೆಚ್ಚ; 3 ಹೊಸ ಫ್ಲಾಟ್ ಫಾರಂ, 4 ಪಿಟ್ ಲೈನ್

 

ಮೈಸೂರು: ಮೈಸೂರು ರೈಲು ನಿಲ್ದಾಣವನ್ನು 395.73 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಹೇಳಿದ್ದಾರೆ.

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸ್ಟೇಷನ್ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಈ ಅಭಿವೃದ್ಧಿಯು ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲಿದೆ. ಹೊಸ ರೈಲುಗಳ ಚಾಲನೆ, ಹಾಲಿ ರೈಲುಗಳ ಸೇವೆ ಹೆಚ್ಚಿಸುವುದು ಹಾಗೂ ಹೊಸ ತಾಣಗಳಿಗೆ ಸಂಪರ್ಕ ಕಲ್ಪಿಸುವಂತೆ ಯೋಜನೆ ರೂಪಿಸಲಾಗಿದೆ’ ಎಂದರು.

ಈ ಯೋಜನೆಯಡಿಯಲ್ಲಿ ಮೂರು ಹೊಸ ಪ್ಲಾಟ್ ಫಾರಂಗಳು, ನಾಲ್ಕು ಪಿಟ್ ಲೈನ್‌ಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಸ್ಟೇಬ್ಲಿಂಗ್ ಲೈನ್‌ಗಳನ್ನು ನಿರ್ಮಿಸಲಾಗುವುದು.

ಮೈಸೂರು ರೈಲು ನಿಲ್ದಾಣವು ಎನ್‌ಎಸ್‌ಜಿ-2 ವರ್ಗಕ್ಕೆ ಸೇರಿದ ನಿಲ್ದಾಣವಾಗಿದ್ದು, ಒಟ್ಟು ಆರು ಪ್ಲಾಟ್ ಫಾರ್ಮ್ ಹೊಂದಿದೆ. ದ್ವಿ ಸಾಪ್ತಾಹಿಕ, ತ್ರೈ ಸಾಪ್ತಾಹಿಕ ಮತ್ತು ಸಾಪ್ತಾಹಿಕ ಸೇವೆಗಳನ್ನು ಒಳಗೊಂಡಂತೆ 106 ರೈಲುಗಳು ಸಂಚರಿಸುತ್ತಿವೆ. ಇವು ಮೈಸೂರು ನಗರಕ್ಕೆ ಹೊಸದಿಲ್ಲಿ, ಪಟನಾ, ಮುಂಬಯಿ, ಕೂಚಿಕುಡಿ, ಚೆನ್ನೈ, ತಿರುಪತಿ, ತಿರುವನಂತಪುರಂ ಸೇರಿದಂತೆ ರಾಜ್ಯದ ವಿವಿಧ ಭಾಗಗಳು, ದೇಶದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುತ್ತವೆ,” ಎಂದು ಮಾಹಿತಿ ನೀಡಿದರು.

“ನಿಲ್ದಾಣದಲ್ಲಿ ದಿನಕ್ಕೆ ಸರಾಸರಿ 60 ಸಾವಿರ ಪ್ರಯಾಣಿಕರ ಸಂಚಾರವಿದ್ದು, ನಿತ್ಯ ಸುಮಾರು 21-25 ಲಕ್ಷ ರೂ. ಆದಾಯ ಗಳಿಸುತ್ತದೆ. ಎಸ್ಕಲೇಟರ್‌ಗಳು, ಲಿಫ್ಟ್‌ಗಳು, ಅಂಡರ್‌ಪಾಸ್, ಪಾದಚಾರಿ ಮೇಲ್ಸೇತುವೆ, ವೈ-ಫೈ, ಕೋಚ್ ಸೂಚನಾ ಫಲಕಗಳು, ಸಾರ್ವಜನಿಕ ಘೋಷಣೆ ವ್ಯವಸ್ಥೆ, ಆಹಾರ ಮಳಿಗೆಗಳು, ನಿರೀಕ್ಷಣಾ ಮಂದಿರಗಳು, ಬ್ಯಾಟರಿ ಚಾಲಿತ ವಾಹನಗಳು, ಎಟಿಎಂಗಳಂತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ನಿಲ್ದಾಣವು ದಿವ್ಯಾಂಗ ಜನ ಸ್ನೇಹಿ ಕೂಡ ಆಗಿದೆ,” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೈ.ಸಿ. ರೇವಣ್ಣ ಹಾಗೂ ನಿವೃತ್ತ ರೈಲ್ವೆ ನೌಕರ ಎಚ್.ಎಸ್. ರಾಮಣ್ಣ ಅವರನ್ನು ಸನ್ಮಾನಿಸಲಾಯಿತು.

ಮುದಿತ್ ಮಿತ್ತಲ್ ಅವರು ವೇದಿಕೆ ಕಾರ್ಯಕ್ರಮದ ನಂತರ ಪರಂಪರೆ ಗ್ಯಾಲರಿ ಹಾಗೂ ಮೈಸೂರು ರೈಲು ಸಂಗ್ರಹಾಲಯಕ್ಕೆ ಭೇಟಿ ನೀಡಿದರು. ಲಲಿತಾ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕ ತಿಕ ಕಾರ್ಯಕ್ರಮ ನೀಡಿದರು.

ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್, ಜಡ್‌ಆರ್ ಯುಸಿಸಿ ಮತ್ತು ಡಿಆರ್ ಯುಸಿಸಿ ಸದಸ್ಯರು, ಶಾಖಾ ಅಧಿಕಾರಿಗಳು, ಲಲಿತಾ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ರೈಲ್ವೆ ಸಿಬ್ಬಂದಿ ಇದ್ದರು.

 

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago